ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದಕ್ಷಿಣಾ ಆಫ್ರಿಕ ಎದುರು ಶರಣಾದ ಹಾಲಿ ಚಾಂಪಿಯನ್ಸ್

Naveen Kumar B C by Naveen Kumar B C
October 27, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಸತತ 2ನೇ ಪಂದ್ಯದಲ್ಲೂ ಸೋತ ಹಾಲಿ ಚಾಂಪಿಯನ್ಸ್, ದಕ್ಷಿಣ ಆಫ್ರಿಕಾ ಎದುರು ಶರಣಾದ ವೆಸ್ಟ್ ಇಂಡೀಸ್..!
ಹಾಲಿ ಚಾಂಪಿಯನ್ಸ್ ವೆಸ್ಟ್ ಇಂಡೀಸ್ ಯುಎಇನಲ್ಲಿ ಮತ್ತೊಮ್ಮೆ ಟಿ20 ವಿಶ್ವಕಪ್ ಎತ್ತುವ ಲಕ್ಷಣ ಕಾಣುತ್ತಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧ 2ನೇ ಲೀಗ್ ಪಂದ್ಯವನ್ನು ಸೋತ ವಿಂಡೀಸ್ ಮುಂದೆ ಸಾಕಷ್ಟು ಸವಾಲುಗಳಿವೆ. ಮೊದಲ ಪಂದ್ಯವನ್ನು ಸೋತಿದ್ದ ದಕ್ಷಿಣ ಆಫ್ರಿಕಾ ವಿಂಡಿಸ್ ವಿರುದ್ಧದ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಖಾತೆ ತೆರೆದು ಪೈಪೋಟಿಗೆ ಬಿದ್ದಿದೆ.

ದುಬೈ ಅಂತರಾಷ್ಟ್ರೀಯ ಮೈದಾನದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆರಿಸಿಕೊಂಡಿತು. ಇನ್ನಿಂಗ್ಸ್ ಆರಂಭಿಸಿದ ಎವಿನ್ ಲೆವಿಸ್ ಬಿರುಸಿನ ಆಟವಾಡಿದರೆ, ಲೆಂಡ್ಲ್ ಸಿಮನ್ಸ್ ರನ್ಗಾಗಿ ಪರದಾಡಿದ್ರು. ಲೆವಿಸ್ 35 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 3 ಫೋರ್ ನೆರವಿನಿಂದ 56 ರನ್ ಗಳಿಸಿ ಮೊದಲಿಗರಾಗಿ ಔಟಾದರು, ಸಿಮನ್ಸ್ 35 ಎಸೆತಗಳನ್ನು ಎದುರಿಸಿ 15 ರನ್ ಗಳಿಸಿದ್ದು ತಂಡಕ್ಕೆ ದುಬಾರಿ ಆಯಿತು.

Related posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

February 2, 2026
ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

February 2, 2026

ನಿಕೊಲಕಸ್ ಪೂರನ್ ಮತ್ತು ಕ್ರಿಸ್ ಗೇಯ್ಲ್ ತಲಾ 12 ರನ್ ಗಳಿಸಲಷ್ಟೇ ಶಕ್ತರಾದರು. ಆಂಡ್ರೆ ರಸೆಲ್ ಮತ್ತು ಶಿಮ್ರನ್ ಹೆಟ್ಮಯರ್ ಸ್ಲಾಗ್ ಓವರುಗಳಲ್ಲಿ ರನ್ ಗಳಿಸಲು ವಿಫಲರಾದರು. 20 ಎಸೆತಗಳಲ್ಲಿ 26 ರನ್ಗಳಿಸಿದ ಪೊಲಾರ್ಡ್ ಹರಿಣಗಳ ಅದ್ಭುತ ಫೀಲ್ಡಿಂಗ್ ಗೆ ಬಲಿಯಾದರು. 20 ಓವರುಗಳಲ್ಲಿ ವೆಸ್ಟ್ ಇಂಡೀಸ್ 8 ವಿಕೆಟ್ ಕಳೆದುಕೊಂಡು 143 ರನ್ಗಳಿಸಿತು. ದಕ್ಷಿಣ ಆಫ್ರಿಕಾದ ಬೌಲಿಂಗ್ ನಲ್ಲಿ ಪ್ರಿಟೊರಿಯಸ್ 3 ವಿಕೆಟ್ ಪಡೆದರೆ, ಕೇಶವ್ ಮಹಾರಾಜ್ 2 ವಿಕೆಟ್ ಪಡೆದುಕೊಂಡರು.

ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಆರಂಭದಲ್ಲೇ ನಾಯಕ ತೆಂಬ ಬವುಮಾ ವಿಕೆಟ್ ಅನ್ನು ರನೌಟ್ ರೂಪದಲ್ಲಿ ಕಳೆದುಕೊಂಡಿತು. ಆದರೆ ರಿಝಾ ಹೆಂಡ್ರಿಕ್ಸ್ ಮತ್ತು ರಾಸಿ ವಾಂಡರ್ ಡ್ಯೂಸನ್ ಇನ್ನಿಂಗ್ಸ್ ನಿಭಾಯಿಸಿ ರನ್ ರೇಟ್ ಮೈಂಟೇನ್ ಮಾಡಿದರು. ಹೆಂಡ್ರಿಕ್ಸ್ 39 ರನ್ ಗಳಿಸಿ ಔಟಾದರು.
ವಾಂಡರ್ ಡ್ಯೂಸನ್ ಜೊತೆ ಸೇರಿದ ಏಡಿಯನ್ ಮಾರ್ಕ್ ರಾಂ ವಿಂಡೀಸ್ ಲೆಕ್ಕಾಚಾರ ತಲೆ ಕೆಳಗೆ ಮಾಡಿದರು. ವಾಣಂಡರ್ ಡ್ಯೂಸನ್ ನಿಧಾನವಾಗಿ ಆಡಿದರೆ ಮಾರ್ಕ್ ರಾಂ ಅಬ್ಬರದ ಆಟ ಆಡಿದರು. ಮಾರ್ಕ್ ರಾಂ 26 ಎಸೆತಗಳಲ್ಲಿ ಅಜೇಯ 51 ರನ್ ಗಳಿಸಿದರು. ವಾಂಡರ್ ಡ್ಯೂಸನ್ 43 ರನ್ ಗಳಿಸಿ ಅಜೇಯರಾಗುಳಿದರು. ದಕ್ಷಿಣ ಆಫ್ರಿಕಾ 18.2 ಓವರುಗಳಲ್ಲಿ ಗುರಿ ಮುಟ್ಟಿ 8 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿತು.

Tags: #saakshatv#T20 World Cup#westindieschampionsCricketDubaikarnatakasharjaaSouth Africa
ShareTweetSendShare
Join us on:

Related Posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

by admin
February 2, 2026
0

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ -...

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

by Shwetha
February 2, 2026
0

ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ...

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

by Shwetha
February 2, 2026
0

ನವದೆಹಲಿ: ಭಾರತದ ಆರ್ಥಿಕ ಚಿತ್ರಣವನ್ನು ಪ್ರತಿಬಿಂಬಿಸುವ ಮಹತ್ವದ ವರದಿಯೊಂದನ್ನು ನೀತಿ ಆಯೋಗ (Niti Aayog) ಬಹಿರಂಗಪಡಿಸಿದೆ. ದೇಶದ ಆರ್ಥಿಕ ಸ್ಥಿತಿ, ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ ಮತ್ತು...

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್  ವಾಗ್ದಾಳಿ

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್ ವಾಗ್ದಾಳಿ

by Shwetha
February 2, 2026
0

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಸ್ಲಿಮ್ ಸಮುದಾಯದ ಮತಗಳನ್ನು ಪಡೆದು ಗೆದ್ದ ಶಾಸಕರು ಇದೀಗ ಅದೇ ಸಮುದಾಯವನ್ನು ಕಡೆಗಣಿಸುತ್ತಿದ್ದಾರೆ. ಕೋಮುವಾದಿ ವ್ಯಕ್ತಿಯೊಬ್ಬನನ್ನು ವೇದಿಕೆಯಲ್ಲಿ ಕೊಂಡಾಡಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram