ನಾಳೆ 66 ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ
ಕರ್ನಾಟಕದಾದ್ಯಂತ ನಾಳೆ 66 ಕನ್ನಡ ರಾಜ್ಯೋತ್ಸವವನ್ನ ಆಚರಿಸಲಾಗುತ್ತದೆ. ಕಂಠೀರವ ಕ್ರಿಡಾಂಗಣದಲ್ಲಿ ರಾಜ್ಯೋತ್ಸವವನ್ನ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಕಲ ತಯಾರಿಗಳನ್ನೂ ಮಾಡಿಕೊಳ್ಳುತ್ತಿದೆ.
66 ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ 66 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನ ನೀಡಲು ಸರ್ಕಾರ ನಿರ್ಧರಿಸಿದೆ.ರಾಜ್ಯ ಸರ್ಕಾರವು ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿಕೊಂಡು ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ ಮಾಡಿದ್ದು, ಎಲ್ಲಾ ಶಾಲೆಗಳಲ್ಲಿ ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಸೂಚನೆ ನೀಡಲಾಗಿದೆ.
ಕನ್ನಡ ರಾಜ್ಯೋತ್ಸವ ಆಚರಣೆಗೆ ತಾಂತ್ರಿಕ ಸಲಹ ಸಮಿತಿಯು ಕೆಲವೊಂದು ಸೂಚನೆಗಳನ್ನ ನೀಡಿದೆ.
ಹೊರಾಂಗಣ ಕಾರ್ಯಕ್ರಮಗಳಲ್ಲಿ 500 ಜನಕ್ಕೂ ಹೆಚ್ಚು ಸೇರುವಂತಿಲ್ಲ
ಕಾರ್ಯಕ್ರಮದಲ್ಲಿ ಭಾಗಿಯಾಗುವ ವ್ಯಕ್ತಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು ಥರ್ಮಲ್ ಸ್ಕ್ರೀನಿಂಗ್ ಆಗಬೇಕು. ಮಾಸ್ಕ್ ಕಡ್ಡಾಯವಾಗಿ ಹಾಕಬೇಕು
ಕಡ್ಡಾಯವಾಗಿ ಸ್ಯಾನಿಟೈಸೇಷನ್ ಮಾಡಲೇಬೇಕು
ಒಂದು ಮೀಟರ್ ಅಷ್ಟು ದೂರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು
ಕಾರ್ಯಕ್ರಮದಲ್ಲಿ ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಮಾಡಲೇಬೇಕು
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಭಾಷಾ ಪ್ರಾಧಿಕಾರವು ಹಲವು ಸ್ಪರ್ದೆ ಮತ್ತು ಅಭಿಯಾನಗಳನ್ನ ಹಮ್ಮಿಕೊಂಡಿದೆ. ಶುದ್ಧ ಕನ್ನಡದಲ್ಲಿ ಮಾತನಾಡುವು, ಕನ್ನಡ ಬರವಣಿಗೆ ಸೇರಿದಂತೆ ಹಲವು ಕಾರ್ಯ ಕ್ರಮಗಳನ್ನ ಹಮ್ಮಿಕೊಂಡಿದೆ.