ಹಾಲಿ ಸಿ ಎಂ ತವರು ಕ್ಷೇತ್ರದಲ್ಲಿ ಕಾಂಗ್ರೇಸ್ ಭಾವುಟ
ರಾಜಕೀಯ ಜಟಾಪಟಿ ಮತ್ತು ವಾಕ್ಸಮರಕ್ಕೆ ಕಾರಣವಾಗಿದ್ದ ಕರ್ನಾಟಕ ಉಪ ಚುನಾವಣೆಯ ಫಲಿತಾಂಶ ಹೊರಬಂದಿದೆ. ಹಾನಗಲ್ ಮತ್ತು ಸಿಂದಗಿಯಲ್ಲಿ ಕ್ರಮವಾಗಿ ಕಾಂಗ್ರೇಸ್ ಮತ್ತು ಬಿಜೆಪಿ ತಲಾ ಒಂದೊಂದು ಕ್ಷೇತ್ರಗಳನ್ನ ಗೆದ್ದುಕೊಂಡಿವೆ. ಜೆಡಿಎಸ್ ಎಂದಿನಂತೆ ಉತ್ತರ ಕರ್ನಾಟಕದಲ್ಲಿ ತನ್ನ ಛಾಪು ಮೂಡಿಸುವಲ್ಲಿ ಎಡವಿ ಬಿದ್ದಿದೆ.
ಹಾನಗಲ್ ಉಪ ಚುನಾವಣೆಯಲ್ಲಿ ಮೊದಲು ನೆಕ್ ಟು ನೆಕ್ ಫೈಟ್ ಏರ್ಪಟ್ಟಿತ್ತು…ಎಣಿಕೆ ಸುತ್ತುಗಳು ಜಾಸ್ತಿಯಾದಂತೆ ಕಾಂಗ್ರೇಸ್ ಮುನ್ನಡೆ ಕಾಯ್ದುಕೊಂಡಿತು. ಕೊನೆಯಲ್ಲಿ ಕಾಂಗ್ರೇಸ್ ನ ಅಭ್ಯಾರ್ಥಿ ಶ್ರೀನಿವಾಸ್ ಮಾನೆ, ಬಿಜೆಪಿ ಅಭ್ಯಾರ್ಥಿ ಶಿವರಾಜ್ ಸಜ್ಜನ್ ಅವರ ವಿರುದ್ಧ 7,598 ಮತಗಳ ಅಂತರದಿಂದ ಜಯ ಸಾಧಿಸಿದರು
ಸಿಂಧಗಿಯಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ 31,185 ಮತಗಳ ಅಂತರದಿಂದ ಭರ್ಜರಿಯಾಗಿ ಗೆದ್ದಿದ್ದಾರೆ.
ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 22 ನೇ ಸುತ್ತಿನಲ್ಲಿ 92,581 ಮತಗಳನ್ನು ಪಡೆದರೆ, ಕಾಂಗ್ರೆಸ್ನ ಅಶೋಕ ಮನಗೂಳಿ 61,735 ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 4,248 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ 30,846 ಮುನ್ನಡೆಯಲ್ಲಿ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.
ಹಾಲಿ ಸಿ ಎಂ ಬಸವರಾಜ್ ಬೊಮ್ಮಾಯಿ ಅವರ ತವರು ಜಿಲ್ಲೆಯ ಕ್ಷೇತ್ರ ಹಾನಗಲ್ ನಲ್ಲಿ ಬಿಜೆಪಿ ಸೋತಿರುವುದು ಬಿಜೆಪಿ ಗೆ ತೀವ್ರ ಹಿನ್ನಡೆಯಾಗಿದೆ.