ಮಂಗಳೂರು : ಬುದ್ದಿವಂತರ ನಾಡು ಮಂಗಳೂರಿನಲ್ಲಿ ಕೊರೊನಾ ಸೋಂಕು ಸಿಡಿಲು ಸಿಡಿಸಿದೆ. ರಾಜ್ಯ ಸರ್ಕಾರ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಅದರ ಮಾಹಿತಿ ಪ್ರಕಾರ ಮಂಗಳೂರಿನಲ್ಲಿ 11 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಮಹಾರಾಷ್ಟ್ರ ಮತ್ತು ಗುಜರಾತ್ ನಿಂದ ಬಂದ 11 ಜನರಿಗೆ ಕೊರೊನಾ ಸೋಂಕು ದೃಡವಾಗಿದೆ. ಇವರನ್ನು ಜಿಲ್ಲಾಡಳಿತ ಕ್ವಾರಂಟೈನ್ ಮಾಡಿತ್ತು. ಸ್ವಾಬ್ ಟೆಸ್ಟ್ ಮಾಡಲಾಗಿತ್ತು. ಇದೀಗ ವರದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಮೂರುವರ್ಷದ ಮಗು ಸೇರಿದಂತೆ 11 ಮಂದಿಗೆ ಕೊರೊನಾ ಪಾಸಿಟವ್ ಕೇಸಸ್ ಪತ್ತೆಯಾಗಿವೆ.
ರಾಜ್ಯದ ಹಲವೆಡೆ ವ್ಯಾಪಕ ಮಳೆ; ಮಳೆಗೆ ಇಬ್ಬರು ಬಲಿ
ಬೆಂಗಳೂರು: ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗುತ್ತಿದ್ದು, ಜನ-ಜೀವನ ಅಸ್ತವ್ಯಸ್ಥವಾಗಿದೆ. ಅಲ್ಲದೇ, ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಬೀದರ್ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಸಿಡಿಲು ಬಡಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ....