ಉಪ್ಪಿಟ್ಟಿನಲ್ಲಿ ಸತ್ತ ಹಾವಿನ ಮರಿ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ
ಹಾಸ್ಟೆಲ್ ನಲ್ಲಿ ಉಪ್ಪಿಟ್ಟು ಸೇವಿಸಿದ್ದ 56 ವಿಧ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಅಬ್ಬೆತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ.
ವಸತಿ ಶಾಲೆಯ ಬೆಳಗಿನ ಉಪಹಾರಕ್ಕೆ ಉಪ್ಪಿಟ್ಟು ತಿಂಡಿ ಮಾಡಿಕೊಡಲಾಗಿತ್ತು. ಉಪಹಾರ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಉಪ್ಪಿಟ್ಟಿನಲ್ಲಿ ಸತ್ತ ಹಾವಿನ ಕಳೆ ಬರಹ ಸಿಕ್ಕಿದೆ. ಹಾವು ಪತ್ತೆಯಾದ ಬಳಿಕ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ.
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನ ಮುದ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ. ಕೆಲವು ವಿದ್ಯಾರ್ಥಿಗಳನ್ನ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಸೇರಿಸಿಲಾಗಿದೆ. ಆಸ್ಪತ್ರೆಗೆ ಯಾದಗಿರಿ ಎಸ್ ಪಿ ಡಾ, ಸಿ ಬಿ ವೇದಮೂರ್ತಿ ಬೇಟಿ ನೀಡಿ ವಿಚಾರಿಸಿದರು.