ಓಮ್ರಿಕಾನ್ ರೂಪಾಂತರಿ ಆತಂಕ – ರಾಜ್ಯದ ಗಡಿಗಳಲ್ಲಿ ಹೈ ಅಲರ್ಟ್
ಕೋವಿಡ್ ಕೇಸ್ಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಕಾರಣ ಮತ್ತು ಓಮಿಕ್ರಾನ್ ರೂಪಾಂತರಿ ವೈರಸ್ ಬಗ್ಗೆ ಆತಂಕ ಸೃಷ್ಠಿಯಾಗಿರುವ ಹಿನ್ನಲೆಯಲ್ಲಿ ರಾಜ್ಯದ ಗಡಿಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೇರಳ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ಮೂಲಕ ಒಳಬರುವ ಎಲ್ಲಾ ವಾಹನಗಳ ಪ್ರಯಾಣಿಕರನ್ನ ತಪಾಸಣೆ ಮಾಡಲಾಗುತ್ತಿದೆ. ಕೇರಳದಲ್ಲಿ ಕೊರೊನಾ ಜೊತೆಗೆ ನ್ಯೂರೋ, ನಿಫಾ ವೈರಸ್ ಕೂಡ ಪತ್ತೆಯಾಗಿರುವ ಹಿನ್ನಲೆಯಲ್ಲಿ ರಾಜ್ಯಕ್ಕೆ ಬರುವ ಪ್ರತಿವಾಹನ ಸವಾರರ ತಪಾಸಣೆ ನಡೆಸಲಾಗುತ್ತಿದೆ.
ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ರಿಪೋರ್ಟ್ ಇದ್ದರಷ್ಟೆ ಅವರಿಗೆ ರಾಜ್ಯಕ್ಕೆ ಬರಲು ಅವಕಾಶ ನೀಡಲಾಗುತ್ತಿದೆ. 72 ಗಂಟೆಯೊಳಗೆ ಆರ್.ಟಿ.ಪಿ.ಸಿ.ಆರ್ ತಪಾಸಣೆ ಮಾಡಿಸಿರಬೇಕು. ಮೈಸೂರು ಭಾಗದಿಂದ ಕೇರಳಕ್ಕೆ ತರಕಾರಿ ಸರಬರಾಜುಗುವ ಕಾರಣ ಗೂಡ್ಸ್ ವಾಹನ ಚಾಲಕರಿಗೆ 15 ದಿನಗಳ ಕಾಲ ವಿನಾಯಿತಿ ನೀಡಲಾಗಿದೆ ಸದ್ಯ ರಾಜ್ಯಕ್ಕೆ ಬರುವ ಪ್ರತಿಯೊಬ್ಬರ ಮೇಲೆ ಆರೋಗ್ಯ ಇಲಾಖೆ ನಿಗಾ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೋಗನೊಳ್ಳಿ ಗಡಿಯಲ್ಲಿ ಸಹ ಅಲರ್ಟ್ ಮಾಡಲಾಗಿದೆ ಮಹರಾಷ್ಟ್ರದಿಂದ ಬರುವ ವಾಹನಗಳಲ್ಲಿ ಪ್ರಯಾಣಿಕರನ್ನ ತಪಾಸಣೆ ಮಾಡಿ ಒಳಬಿಡಲಾಗುತ್ತಿದೆ. ಮೈಸೂರು ಚಾಮರಾಜನಗರ ಕೊಡಗು ಬೀದರ್ ಬೆಳಗಾವಿ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ಮೂಲಕ ತಪಾಸಣೆ ನಡಿಸಿ ನಂತರ ಬರಲು ಅವಕಾಶ ಮಾಡಿಕೊಡಲಾಗುತ್ತಿದೆ.








