ಗುವಾಹಟಿ: 12 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಯುವಕರು ಸಾಮೂಹಿಕ ಅತ್ಯಾಚಾರ ಮಾಡಿ ಮರಕ್ಕೆ ನೇಣು ಹಾಕಿ ಕೊಂದಿರುವ ಘಟನೆ ಅಸ್ಸಾಂನ ಬಿಸ್ವನಾಥ್ ಜಿಲ್ಲೆಯ ಚಕ್ಲಾ ಗ್ರಾಮದಲ್ಲಿ ನಡೆದಿದೆ. ಸದ್ಯ ಪ್ರಕರಣದ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇವರು 10ನೇ ತರಗತಿಯ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.
ಪರೀಕ್ಷೆ ನಂತರ ಪಾರ್ಟಿಯ ನೆಪದಲ್ಲಿ ಆರೋಪಿಗಳು ಸಂತ್ರಸ್ತೆಯನ್ನು ಮನೆಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಮನೆಯ ಸಮೀಪದ ಕಾಡಿನಲ್ಲಿದ್ದ ಮರಕ್ಕೆ ನೇಣುಹಾಕಿದ್ದಾರೆ. ಇನ್ನು ಎಷ್ಟೋತ್ತಾದರೂ ಬಾಲಕಿ ಮನೆಗೆ ಬಾರದ ಹಿನ್ನೆಲೆ ಆತಂಕಗೊಂಡಿದ್ದ ಸಂತ್ರಸ್ತೆಯ ಪೋಷಕರು, ರಾತ್ರಿವಿಡಿ ಬಾಲಕಿಗಾಗಿ ಶೋಧ ನಡೆಸಿದ್ದು, ಶನಿವಾರ ಮುಂಜಾನೆ ಕಾಡಿನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಇನ್ನು ಈ ಸಂಬಂಧ ಗೋಹಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ
ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...








