ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ರಾಜಸ್ಥಾನದ ಕೋಟಾದಲ್ಲಿ ನಡೆದ ಮೆರವಣಿಗೆಯಲ್ಲಿ ಶಾಕ್ನಿಂದ ಗಾಯಗೊಂಡಿದ್ದ 14 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ದಾಖಲಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಘಟನೆಯಲ್ಲಿ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಒಬ್ಬರಿಗೆ ಶೇ.100 ರಷ್ಟು ಸುಟ್ಟ ಗಾಯಗಳಾಗಿವೆ.
ಸಾಧ್ಯವಿರುವ ಎಲ್ಲ ಚಿಕಿತ್ಸೆ ನೀಡಲು ವಿಶೇಷ ತಂಡವನ್ನು ರಚಿಸಲಾಗಿದೆ. ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಆರೋಗ್ಯ ಸಚಿವ ಹೀರಾಲಾಲ್ ನಿರ್ಲಕ್ಷ್ಯ ಕಂಡು ಬಂದಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.