ಬೆಂಗಳೂರು: ಕಾರಿನಲ್ಲಿದ್ದ 14 ಲಕ್ಷ ರೂ. ಹಣವನ್ನು ಖದೀಮರು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಪಾರ್ಕ್ ಮಾಡಿದ್ದ ಬಿಎಂಡಬ್ಲ್ಯು ಕಾರಿನ (BMW Car) ಕಿಟಕಿ ಗಾಜು ಒಡೆದು 14 ಲಕ್ಷ ರೂ. ನಗದು ದೋಚಿ ಇಬ್ಬರು ವ್ಯಕ್ತಿಗಳು ಪರಾರಿಯಾಗಿದ್ದಾರೆ. ಈ ಘಟನೆ ನಗರದ ಆನೇಕಲ್ ತಾಲೂಕಿನ ಸೋಂಪುರದ ಸಬ್ ರಿಜಿಸ್ಟರ್ ಕಚೇರಿ ಮುಂಭಾಗದಲ್ಲಿ ನಡೆದಿದೆ.
ಕಾರಿನಿಂದ ನಗದು ಕದ್ದು ಕಳ್ಳರು ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ (CCTV Camera) ಸೆರೆಯಾಗಿದೆ. ಸದ್ಯ ಪ್ರಕರಣದ ಕುರಿತು ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾರಿನ ಗಾಜು ಒಡೆದು ಒಳನುಗ್ಗಿದ ಖದೀಮ, ತುಸು ಹೊತ್ತಿನಲ್ಲಿ ಚೀಲವೊಂದನ್ನು ಕೈಯಲ್ಲಿ ಹಿಡಿದುಕೊಂಡು ಹೊರಬಂದಿರುವುದು ಸಿಸಿಟಿವಿಯಲ್ಲಿ ಕಂಡು ಬಂದಿದೆ. ಕೂಡಲೇ ಸಹಚರನೊಂದಿಗೆ ಬೈಕ್ ಹತ್ತಿ ಪರಾರಿಯಾಗಿದ್ದಾನೆ.