ಕೊರೊನಾ ಹರಡುವಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಇಂದು ರಾತ್ರಿ ಎಂಟು ಗಂಟೆಗೆ ದೇಶವನ್ನ ಉದ್ದೇಶಿಸಿ ಪಿ. ಎಂ ಮೋದಿ ಮತ್ತೊಮ್ಮೆ ಮಾತನಾಡಿದ್ದಾರೆ. ದೇಶವನ್ನು ಎಚ್ಚರಿಸಿದ ಮೋದಿ, ಕೊರೊನಾ ಸೋಂಕು ಲೆಕ್ಕಿಸದೆ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ , ಅಂಬುಲೇನ್ಸ್ ಚಾಲಕರ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಬಗ್ಗೆ ಯೋಚಿಸಬೇಕು. ಅವರು ನಮಗಾಗಿ 24 ಗಂಟೆಗಳ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಾಗಿ ದೇಶದ ಜನರ ಮನೆಯಿಂದ ಹೊರ ಬರಬೇಡಿ. ನಿಮಗೆ ನೀವೇ ಲಕ್ಷ್ಮಣ ರೇಖೆ ಹಾಕಿಕೊಳ್ಳಿ. ಕೊರೊನಾ ವಿರುದ್ದ ಹೋರಾಟ ನಡೆಸಲು 15 ಸಾವಿರ ಕೋಟಿ ನೀಡಲಾಗುವುದು. ಎಲ್ಲಾ ರಾಜ್ಯಗಳಿಗೂ ಆರೋಗ್ಯ ವಿಚಾರವೇ ಮುಖ್ಯವಾಗಿರಬೇಕು. ಈ ಬಗ್ಗೆ ರಾಜ್ಯ ಸರ್ಕಾರಗಳಿಗೆ ಪ್ರಧಾನ ಮಂತ್ರಿ ಸೂಚನೆ ನೀಡಲಾಗಿದೆ. ಅಲ್ಲದೆ ದೇಶದ ಜನರು 21 ದಿನಗಳ ಕಾಲ ಮನೆಯಿಂದ ಹೊರ ಬರಬಾರದು ಎಂದು ಮೋದಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ
2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...








