ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡ ಪರಿಣಾಮ 15 ಜನ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಡೆದಿದೆ.
ಅಲಕನಂದಾ ನದಿ ತೀರದಲ್ಲಿ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡ ಪರಿಣಾಮ ಸೇತುವೆಯೊಂದರಲ್ಲಿ ವಿದ್ಯುತ್ ಹರಿದು ಉಂಟಾದ ಅವಘಡದಲ್ಲಿ ಸುಮಾರು 15 ಜನ ಸಾವನ್ನಪ್ಪಿ, ಅನೇಕರು ಗಾಯಗೊಂಡ ಭೀಕರ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಡೆದಿದೆ. ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮರಣ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂತ್ರಸ್ತರೆಲ್ಲರೂ ನಮಾಮಿ ಗಂಗೆ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಹಳ್ಳಿಯೊಂದರಲ್ಲಿ ಅಲಕಾನಂದ ನದಿಗೆ ನಿರ್ಮಿಸಿರುವ ಸೇತುವೆಗೆ ವಿದ್ಯುತ್ ತಂತಿ ತಗುಲಿದ್ದರಿಂದ, ಮೇಲಿದ್ದವರಿಗೆ ವಿದ್ಯುದಾಘಾತವಾಗಿದೆ. ಹೀಗಾಗಿ ಈ ಘಟನೆ ನಡೆದಿದೆ.
ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಕಾರ್ಯಾಚರಣೆ ಆರಂಭಿಸಿದ್ದಾರೆ. ಮೃತರಲ್ಲಿ ಒಬ್ಬ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಐವರು ಹೋಂ ಗಾರ್ಡ್ಗಳು ಸೇರಿದ್ದಾರೆ