ಭಾರಿ ಮಳೆಯಿಂದ ಶಾಲೆ ಜಲಾವೃತ – 150 ವಿದ್ಯಾರ್ಥಿಗಳ ರಕ್ಷಣೆ…
ಹಳ್ಳದ ಹರಿವು ಹೆಚ್ಚಿದ ಹಿನ್ನೆಲೆ ಸರ್ಕಾರಿ ಪ್ರೌಢ ಶಾಲೆಗೆ ತೆರಳಿದ್ದ ಸುಮಾರು 150 ವಿದ್ಯಾರ್ಥಿಗಳು ಶಾಲೆಯಲ್ಲಿಯೇ ಸಿಲುಕಿದ್ದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳದಲ್ಲಿ ನಡೆದಿದೆ.
ಇದೀಗ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಕ್ಕಳನ್ನು ರಕ್ಷಿಸಿ, ಮನೆಗೆ ಕಳುಹಿಸುವ ಕಾರ್ಯ ಯಶಸ್ವಿಯಾಗಿದೆ. 5 ತಾಸು ಶಾಲೆಯಲ್ಲೇ ಬಂಧಿಯಾಗಿದ್ದ 130 ವಿದ್ಯಾರ್ಥಿಗಳು, ಶಿಕ್ಷಕರನ್ನು ಟ್ರ್ಯಾಕ್ಟರ್ ಮೂಲಕ ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ.
ಬೆಳವಟಗಿ ಗ್ರಾಮ ಪಂಚಾಯತ್ ಅಧಿಕಾರಿ, ಸದಸ್ಯರು, ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಮತ್ತು ಗ್ರಾಮಸ್ಥರು ಸೇರಿ ವಿದ್ಯಾರ್ಥಿಗಳನ್ನ ರಕ್ಷಿಸಿ ಸುರಕ್ಷಿತವಾಗಿ ಮನೆಗಳಿಗೆ ತಲುಪಿಸಿದ್ದಾರೆ ಎಂದು ಬೆಳವಟಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಾನಂದ ಹಂಪಿಹೊಳಿ ಮಾಹಿತಿ ನೀಡಿದ್ದಾರೆ.








