ತುಮಕೂರು: ಜ್ಯೋತಿಷಿಯೊಬ್ಬ ನಿಧಿ (Treasure) ನಿಕ್ಷೇಪ ತೋರಿಸುವುದಾಗಿ 16 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದ್ದು, ಗ್ರಾಮಸ್ಥರು ಆತನನ್ನು ಕಿಡ್ನಾಪ್ ಮಾಡಿದ್ದಾರೆ ಎನ್ನಲಾಗಿದೆ.
ಈ ಘಟನೆ ಬೆಂಗಳೂರಿನ ಕಮಲಾ ನಗರ ನಿವಾಸಿಗಳು ಜ್ಯೋತಿಷಿಯನ್ನು ಕಿಡ್ನಾಪ್ (Kidnap) ಮಾಡಿದ ಘಟನೆ ಪಾವಗಡ (Pavagada) ತಾಲೂಕಿನ ರಾಜವಂತಿ ಗ್ರಾಮದಲ್ಲಿ ನಡೆದಿದೆ. ರಾಜವಂತಿ ಗ್ರಾಮದ ಜ್ಯೋತಿಷಿ ರಾಮಣ್ಣ ಸ್ವಾಮಿ ಎಂಬಾತನನ್ನೇ ಕಮಲಾನಗರದ ನಿವಾಸಿಗಳು ಕಿಡ್ನಾಪ್ ಮಾಡಿದ್ದಾರೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾವಗಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಶಿವರಾಜು (32), ಮೇದರಹಳ್ಳಿ ಚಿಕ್ಕಬಾಣಾವರದ ಅನಂತಕೃಷ್ಣ (21), ಆಂಧ್ರದ ಮಡಕಶಿರಾ ತಾಲೂಕಿನ ಕೊತಾಲಗುಟ್ಟದ ನರೇಶ್ (25) ಬಂಧಿತರು. ನಿಧಿಯ ಅತಿ ಆಸೆಗಾಗಿ ಹಣ ನೀಡಿದವರು ಮತ್ತೆ ಹಣ ಪಡೆಯಲು ಜ್ಯೋತಿಷಿಯ ಕಿಡ್ನಾಪ್ ಪ್ಲಾನ್ ಮಾಡಿದ್ದಾರೆ. ಮತ್ತೊಬ್ಬ ಆರೋಪಿ ಹರೀಶ್ ಪರಾರಿಯಾಗಿದ್ದು, ಆತನಿಗಾಗಿ ಬಲೆ ಬೀಸಿದ್ದಾರೆ.
ಬೈಕ್ ನಲ್ಲಿ ಹೊರಟಿದ್ದ ಜ್ಯೋತಿಷಿ ರಾಮಣ್ಣನನ್ನು ಎರಡು ಕಾರುಗಳಲ್ಲಿ ಬಂದು ಕಿಡ್ನಾಪ್ ಮಾಡಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆರೋಪಿಗಳು ರಾಮಣ್ಣನ ಮೊಬೈಲ್ನಿಂದಲೇ ಆತನ ಮಗನಿಗೆ ಕರೆ ಮಾಡಿದ್ದರು. ನಿಮ್ಮ ತಂದೆ 16 ಲಕ್ಷ ರೂ. ಸಾಲ ಪಡೆದಿದ್ದಾರೆ. ಆ ಹಣ ನೀಡಿ ನಿಮ್ಮ ತಂದೆ ಬಿಡಿಸಿಕೊಂಡು ಹೋಗು ಎಂದು ಹೇಳಿದ್ದಾರೆ. ಆಗ ಮಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ.