ಚಾಮರಾಜನಗರ: ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು 102ರ ವೃದ್ಧೆಯೊಬ್ಬರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.
ಈ ಮಹಿಳೆ 18 ಕಿ.ಮೀ ಕಾಲ್ನಡಿಗೆ ಮೂಲಕ ಶತಾಯುಷಿ ಅಜ್ಜಿ ಕ್ರಮಿಸಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ಮೂಲದ ಪಾರ್ವತಮ್ಮ ಈ ರೀತಿ ಪಾದಯಾತ್ರೆ ಕೈಗೊಂಡ ವೃದ್ಧೆ. ದೇಶಕ್ಕೆ ಒಳ್ಳೆಯದಾಗಬೇಕು. ರೈತರಿಗೆ ಒಳ್ಳೆಯದಾಗಬೇಕು. ಮಳೆ-ಬೆಳೆ ಚೆನ್ನಾಗಿ ಆಗಬೇಕೆಂದರೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಹೀಗಾಗಿ ನಾನು ಪಾದಯಾತ್ರೆ ಕೈಗೊಂಡಿದ್ದೇನೆ ಎಂದು ಅಜ್ಜಿ ಹೇಳಿದ್ದಾರೆ.
ಈ ವೃದ್ಧೆ ಸುಮಾರು ಐದಾರು ವರ್ಷಗಳಿಂದ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ್ದಾರೆ.