ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ (Loksabha Election) ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2.25 ಕೋಟಿ ರೂ. ಸುಲಿಗೆ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರ ಸಹೋದರ ಅರೆಸ್ಟ್ ಆಗಿದ್ದಾರೆ.
ಸಹೋದರ ಗೋಪಾಲ್ ಜೋಶಿ (Gopal Joshi) ಅವರನ್ನು ಹುಬ್ಬಳ್ಳಿಯಲ್ಲಿ ಬಂಧಿಸಲಾಗಿದೆ. ಬೆಂಗಳೂರಿನ ಬಸವೇಶ್ವರ ನಗರ ಠಾಣಾ ಪೊಲೀಸರು ಗೋಪಾಲ್ ಜೋಶಿ ಅವರನ್ನು ಬಂಧಿಸಿದ್ದಾರೆ.
ಹುಬ್ಬಳ್ಳಿ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಸಿದ ನಂತರ ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿನ ಗೋಪಾಲ ಜೋಶಿ ಅವರ ಮನೆಗೆ ಕರೆ ತಂದು ವಿಚಾರಣೆ ನಡೆಸುತ್ತಿದ್ದಾರೆ. ದೂರುದಾರೆ ಸುನೀತಾ ಚೌಹ್ವಾಣ್ ಸಹ ಕೇಶ್ವಾಪುರ ಠಾಣೆ ಆಗಮಿಸಿದ್ದು ಅವರಿಂದ ಪೊಲೀಸರು ಹೇಳಿಕೆ ಪಡೆಯುತ್ತಿದ್ದಾರೆ ಎಂದು ತಿಳಿದ ಬಂದಿದೆ.
ದೂರಿನ ಆಧಾರದ ಮೇಲೆ ಬೆಂಗಳೂರು ಪೊಲೀಸರು ಗೋಪಾಲ್ ಜೋಶಿ, ವಿಜಯಲಕ್ಷ್ಮೀ ಹಾಗೂ ಅಜಯ್ ಜೋಶಿ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
ಈ ವಿಷಯವಾಗಿ ಮಾತನಾಡಿರುವ ಕೇಂದ್ರ ಸಚಿವ, ಗೋಪಾಲ್ ಜೋಶಿ ನನ್ನ ಸಹೋದರ ಅದರಲ್ಲಿ ಯಾವುದೇ ಅನುಮಾನವಿಲ್ಲ. ಈಗ ಅವರಿಗೂ ನನಗೂ ಯಾವುದೇ ಕೌಟುಂಬಿಕ ಹಾಗೂ ಹಣಕಾಸಿಕ ಸಂಬಂಧ ಇಲ್ಲ ಎಂದಿದ್ದಾರೆ.