ಕೋಲಾರ: ಯಾವುದೇ ಸೂಕ್ತ ದಾಖಲೆ ಇಲ್ಲದೆ ಅಕ್ರಮವಾಗಿ ಹಣ ಸಾಗಿಸುತ್ತಿದ್ದ 2 ಕೋಟಿ ರೂ.ಗಳನ್ನು ಕೋಲಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಶ್ರೀನಿವಾಸಪುರ ತಾಲೂಕಿನ ರೋಜೇನಹಳ್ಳಿ ಗೇಟ್ ಬಳಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಹಣ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ.
ಹಣ ತೆಗೆದುಕೊಂಡು ಹೋಗುತ್ತಿದ್ದ ಕೋಲಾರ ಮೂಲದ ಚಂದ್ರು ಹಾಗೂ ಅಮರ್ ನಾಥ್ ಎಂಬುರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಕೊರೊನಾ ಸಂಕಷ್ಟ ಕಾಲದಲ್ಲಿ ಇಷ್ಟು ಹಣ ಹೇಗೆ ಬಂತು, ಯಾರಿಗೆ ಸೇರಿದ್ದು, ಉದ್ದೇಶ ಏನು ಎಂಬ ಹತ್ತು ಹಲವು ಅನುಮಾನಗಳು ಪೊಲೀಸರಿಗೆ ಮೂಡಿದೆ. ಸ್ಥಳಕ್ಕೆ ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...








