ಕೊರೊನಾ ಭೀತಿಯಿಂದ ದೇಶವೇ ಲಾಕ್ ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ರಾಜಧಾನಿಯಲ್ಲಿ ಕೆಲ ಕಡೆ ಕ್ಲಿನಿಕ್ ಗಳು ಬಂದ್ ಆಗಿವೆ. ಹಾಗಾಗಿ ರಾಜ್ಯ ಸರ್ಕಾರ ಕ್ಲಿನಿಕ್ ಓಪನ್ ಮಾಡುವಂತೆ ಸೂಚನೆ ನೀಡಿದೆ. ಇದರ ಜೊತೆಗೆ ಬಿಎಂಟಿಸಿ ಆಸ್ಪತ್ರೆಗಳ ಸಿಬ್ಬಂದಿಗಳಿಗಾಗಿ 200 ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದೆ. ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಆಸ್ಪತ್ರೆ ಸಿಬ್ಬಂದಿಗಳ ಪ್ರಯಾಣಕ್ಕೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಈ ವ್ಯವಸ್ಥೆ ಮಾಡಲಾಗಿದೆ. ತುರ್ತು ಸಂದರ್ಭಗಳಲ್ಲಿ ಕಾರ್ಯನಿರ್ವಹಿಸುವವರಿಗಾಗಿ 200 ಬಸ್ ರೂಟ್ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆ ಸಿಬ್ಬಂದಿಗಳು ತಾವು ಕಾರ್ಯನಿರ್ವಹಿಸುವ ಸಂಸ್ಥೆಗಳ ಗುರುತಿನ ಚೀಟಿ ತೋರಿಸಿ ಈ ಬಸ್ ಗಳಲ್ಲಿ ಪ್ರಯಾಣಿಸಬಹುದಾಗಿದೆ.ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಈ ವಿಶೇಷ ಸೇವೆ ನೀಡಲ್ಲ ಎಂದು ಸಚಿವರು ಹೇಳಿದ್ದಾರೆ.
2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ
2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...








