ಬೆಳಗಾವಿ: ನಕಲಿ ನೋಟು ಸರಬರಾಜು ಮಾಡುತ್ತಿದ್ದ ಐವರು ಅಂತಾರಾಜ್ಯ ಕಳ್ಳರನ್ನು ಬೆಳಗಾವಿ ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಕ್ಕೇರಿ ತಾಲೂಕಿನ ಕಮತನೂರ ಕ್ರಾಸ್ ಬಳಿ ಎರಡು ಪ್ರತ್ಯೇಕ ವಾಹನಗಳಲ್ಲಿ 23.88 ಲಕ್ಷ ರೂ. ನಕಲಿ ಮತ್ತು 12 ಸಾವಿರ ರೂ. ಮೌಲ್ಯದ ಅಸಲಿ ನೋಟು ಸಾಗಿಸುವ ಸಂದರ್ಭದಲ್ಲಿ ಡಿಸಿಐಬಿ ಹಾಗೂ ಸಂಕೇಶ್ವರ ಠಾಣೆಯ ಪೊಲೀಸರು ದಾಳಿ ನಡೆಸಿ, ಐವರು ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರದ ಅಮರ್ ಶಂಕರ್ ಅಂಬೇಕರ, ಧೈರ್ಯಶೀಲ ಬಾಬುರಾವ್ ಪಾಟೀಲ್, ಬಾಬಾಸೋ ವಸಂತ್ ಪಾಟೀಲ್, ರಾಜೇಶ್ ಮಾರುತಿ ಮೋಹಿತೆ ಮತ್ತು ಅಶೋಕ್ ಶಂಕರ್ ತೇಲಿ ಬಂಧಿತ ಆರೋಪಿಗಳಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಒಟ್ಟು 12 ಸಾವಿರ ರೂ. ಅಸಲಿ ನೋಟು ಮತ್ತು 23.88 ಲಕ್ಷ ರೂ. ನಕಲಿ ನೋಟನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿ ಸಂದರ್ಭದಲ್ಲಿ ನೋಟುಗಳ ಜತೆಗೆ ಸಾಗಣಿಕೆಗೆ ಬಳಸುತ್ತಿದ್ದ ಬುಲೇರೋ ಜೀಪ್, ಸುಜುಕಿ ಸ್ವಿಫ್ಟ್ ಕಾರು ಹಾಗೂ 5 ವಿವಿಧ ಕಂಪೆನಿಯ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನವಮಿಯಂದ ರಾಮನ ಹಣೆಮೇಲೆ ಸೂರ್ಯನ ತಿಲಕ!!
ಅಯೋಧ್ಯೆ: ರಾಮನವಮಿಯಂದು ಗರ್ಭ ಗುಡಿಯಲ್ಲಿರುವ ರಮನ ಹಣೆ ಮೇಲೆ ಸೂರ್ಯನು ತಿಲಕ ಇಡಲಿದ್ದಾನೆ. ಹೌದು! ಇದಕ್ಕಾಗಿ ಆಪ್ಟಿಕಲ್ ಯಂತ್ರವನ್ನು ಬೆಂಗಳೂರು ಮೂಲದ ಕಂಪನಿಯೊಂದು ರಾಮ ಜನ್ಮಭೂಮಿ ಟ್ರಸ್ಟ್ಗೆ...