ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಅಪರಾಧ

25 ದಿನ, 150 ಕೋಟಿ ಲೂಟಿ: ದೇಶವನ್ನೇ ನಡುಗಿಸಿದ ಸೈಬರ್ ಜಾಲ, ದಾವಣಗೆರೆಯಲ್ಲಿ ಕಿಂಗ್‌ಪಿನ್ ಸೆರೆ!

25 days, 150 crores looted: Cyber ​​network that shook the country, kingpin arrested in Davangere!

Shwetha by Shwetha
October 13, 2025
in ಅಪರಾಧ, Crime, Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ದಾವಣಗೆರೆ: ಕೇವಲ 25 ದಿನಗಳಲ್ಲಿ ದೇಶದ ವಿವಿಧ ರಾಜ್ಯಗಳ ನೂರಾರು ಜನರ ಬ್ಯಾಂಕ್ ಖಾತೆಗಳಿಂದ ಬರೋಬ್ಬರಿ 150 ಕೋಟಿ ರೂಪಾಯಿ ದೋಚಿದ್ದ ಬೃಹತ್ ಸೈಬರ್ ವಂಚನಾ ಜಾಲದ ಪ್ರಮುಖ ಆರೋಪಿಯನ್ನು ದಾವಣಗೆರೆ ಸೈಬರ್ ಕ್ರೈಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಸನ ಜಿಲ್ಲೆ ಬೇಲೂರಿನ ಸಿಸಿ ಕ್ಯಾಮರಾ ಟೆಕ್ನಿಷಿಯನ್ ಸಯ್ಯದ್ ಅರ್ಫಾತ್ (28) ಬಂಧಿತನಾಗಿದ್ದು, ಈತನ ಬಂಧನದಿಂದ ರಾಷ್ಟ್ರವ್ಯಾಪಿ ಹಬ್ಬಿದ್ದ ಆನ್‌ಲೈನ್ ದರೋಡೆಯ ಭಯಾನಕ ಜಾಲವೊಂದು ಬೆಳಕಿಗೆ ಬಂದಿದೆ.

ದಾವಣಗೆರೆಯ ದೂರುದಾರನಿಂದ ಬಯಲಾದ ಸತ್ಯ

Related posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

February 2, 2026
ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

February 2, 2026

ಈ ಬೃಹತ್ ಜಾಲ ಪತ್ತೆಯಾಗಲು ಕಾರಣವಾಗಿದ್ದು ದಾವಣಗೆರೆಯಲ್ಲಿ ನಡೆದ ಒಂದು ವಂಚನೆ ಪ್ರಕರಣ. ನಗರದ ನಿಟುವಳ್ಳಿ ನಿವಾಸಿ ಎಚ್.ಎಸ್. ಪ್ರಮೋದ್ ಅವರ ಕೆನರಾ ಬ್ಯಾಂಕ್ ಖಾತೆ ಆಗಸ್ಟ್ 14 ರಂದು ದಿಢೀರ್ ಬ್ಲಾಕ್ ಆಗಿತ್ತು. ಬ್ಯಾಂಕ್ ಸಿಬ್ಬಂದಿಯನ್ನು ಸಂಪರ್ಕಿಸಿದಾಗ, ತಾಂತ್ರಿಕ ಕಾರಣದಿಂದ ಹೀಗಾಗಿದ್ದು, ಐದು ದಿನಗಳಲ್ಲಿ ಸರಿಹೋಗುತ್ತದೆ ಎಂದು ತಿಳಿಸಿದ್ದರು. ಆದರೆ ಆಗಸ್ಟ್ 25 ರಂದು ಪ್ರಮೋದ್ ಅವರು ತಮ್ಮ ಖಾತೆಯನ್ನು ಪರಿಶೀಲಿಸಿದಾಗ, ಅದರಲ್ಲಿ ಕೇವಲ 4,956 ರೂಪಾಯಿ ಉಳಿದಿರುವುದು ಕಂಡು ಬೆಚ್ಚಿಬಿದ್ದಿದ್ದಾರೆ.

ತಮ್ಮ ಖಾತೆಯಿಂದ ಬರೋಬ್ಬರಿ 52,60,523 ರೂಪಾಯಿ ಮಾಯವಾಗಿರುವುದನ್ನು ಕಂಡು ತಕ್ಷಣ ಬ್ಯಾಂಕ್ ವ್ಯವಸ್ಥಾಪಕರನ್ನು ವಿಚಾರಿಸಿದಾಗ, ನೆಟ್ ಬ್ಯಾಂಕಿಂಗ್ ಮೂಲಕ ಹಣ ವರ್ಗಾವಣೆಯಾಗಿರುವ ಮಾಹಿತಿ ಲಭಿಸಿದೆ. ತಾನು ಯಾವುದೇ ವ್ಯವಹಾರ ನಡೆಸಿಲ್ಲವೆಂದು ಅರಿತ ಪ್ರಮೋದ್, ತಕ್ಷಣವೇ ದಾವಣಗೆರೆ ಸೈಬರ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದರು.

ಪೊಲೀಸರ ಚಾಣಾಕ್ಷ ತನಿಖೆ

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸೈಬರ್ ಪೊಲೀಸರ ತಂಡ, ತನಿಖೆ ಆರಂಭಿಸಿತು. ಹಣ ವರ್ಗಾವಣೆ ಮಾಡಲು ಬಳಸಲಾಗಿದ್ದ ಮೊಬೈಲ್ ಸಂಖ್ಯೆಯ ಜಾಡು ಹಿಡಿದು ಹೊರಟ ಪೊಲೀಸರಿಗೆ, ಆ ಸಂಖ್ಯೆ ಹಾಸನದ ಬೇಲೂರಿನಲ್ಲಿ ಸಕ್ರಿಯವಾಗಿರುವುದು ತಿಳಿಯಿತು. ತಕ್ಷಣ ಕಾರ್ಯಪ್ರವೃತ್ತರಾದ ತಂಡ, ಸಿಸಿ ಕ್ಯಾಮರಾ ಕೆಲಸಗಾರನ ಸೋಗಿನಲ್ಲಿದ್ದ ಸಯ್ಯದ್ ಅರ್ಫಾತ್‌ನನ್ನು ಬಂಧಿಸಿತು. ಆತನ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲಿಸಿದಾಗ, ಪೊಲೀಸರೇ ದಂಗಾಗುವಂತಹ ಸತ್ಯಗಳು ಹೊರಬಿದ್ದವು.

ಮೊದಲಿಗೆ, ದಾವಣಗೆರೆ ನ್ಯಾಯಾಲಯದ ಆದೇಶದ ಮೇರೆಗೆ, ಪೊಲೀಸರು ಪ್ರಮೋದ್ ಅವರಿಗೆ ಕಳೆದುಹೋಗಿದ್ದ 52,60,400 ರೂಪಾಯಿಗಳನ್ನು ಮರಳಿ ಕೊಡಿಸುವಲ್ಲಿ ಯಶಸ್ವಿಯಾದರು.

ಬಯಲಾದ ರಾಷ್ಟ್ರವ್ಯಾಪಿ 150 ಕೋಟಿ ವಂಚನೆ ಜಾಲ

ಸಯ್ಯದ್ ಅರ್ಫಾತ್‌ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ, ಇದೊಂದು ಸಣ್ಣಪುಟ್ಟ ವಂಚನೆಯಲ್ಲ, ಬದಲಿಗೆ ದೇಶದ ಹಲವು ರಾಜ್ಯಗಳಲ್ಲಿ ಬೇರುಬಿಟ್ಟಿರುವ ಬೃಹತ್ ಜಾಲ ಎಂಬುದು ಸ್ಪಷ್ಟವಾಯಿತು. ಆರೋಪಿಗಳ ಚಾಲ್ತಿ ಖಾತೆಯನ್ನು ಪರಿಶೀಲಿಸಿದಾಗ, ಜುಲೈ 27 ರಿಂದ ಆಗಸ್ಟ್ 19 ರವರೆಗಿನ ಕೇವಲ 25 ದಿನಗಳ ಅವಧಿಯಲ್ಲಿ ಸುಮಾರು 150 ಕೋಟಿ ರೂಪಾಯಿ ಜಮೆಯಾಗಿರುವುದು ಪತ್ತೆಯಾಗಿದೆ.

ಈ ಜಾಲವು ಉತ್ತರ ಪ್ರದೇಶದ ಗಾಜಿಯಾಬಾದ್, ಜಮ್ಮು ಮತ್ತು ಕಾಶ್ಮೀರದ ಶ್ರೀನಗರ, ಆಂಧ್ರಪ್ರದೇಶದ ಏಲೂರು, ಮಹಾರಾಷ್ಟ್ರದ ಮುಂಬೈ ಹಾಗೂ ಕರ್ನಾಟಕದ ಬೆಂಗಳೂರು ಮತ್ತು ದಾವಣಗೆರೆಯಲ್ಲಿ ದಾಖಲಾದ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದೆ.

132 ಕೋಟಿ ರೂಪಾಯಿ ಎಲ್ಲಿಗೆ ಹೋಯಿತು?

ಆರೋಪಿಗಳು ತಮ್ಮ ಖಾತೆಗೆ ಜಮೆಯಾದ 150 ಕೋಟಿ ರೂಪಾಯಿಗಳಲ್ಲಿ, ಕಣ್ಣು ಮಿಟುಕಿಸುವುದರೊಳಗೆ 132 ಕೋಟಿ ರೂಪಾಯಿಗಳನ್ನು ವಿತ್‌ಡ್ರಾ ಮಾಡಿಕೊಂಡಿದ್ದಾರೆ. ಈ ಹಣವನ್ನು ಯಾರಿಗೆ ವರ್ಗಾಯಿಸಲಾಗಿದೆ ಅಥವಾ ಯಾವ ರೂಪದಲ್ಲಿ ಬಚ್ಚಿಡಲಾಗಿದೆ ಎಂಬುದು ಈಗ ತನಿಖೆಯ ಕೇಂದ್ರಬಿಂದುವಾಗಿದೆ. ಈ ಹಣ ಭಯೋತ್ಪಾದಕ ಚಟುವಟಿಕೆಗಳಿಗೆ ಅಥವಾ ಇತರ ದೇಶವಿರೋಧಿ ಕೃತ್ಯಗಳಿಗೆ ಬಳಕೆಯಾಗಿರುವ ಶಂಕೆಯನ್ನೂ ಪೊಲೀಸರು ತಳ್ಳಿಹಾಕಿಲ್ಲ.

ಪ್ರಸ್ತುತ ಆರೋಪಿಯ ಖಾತೆಯಲ್ಲಿದ್ದ 18 ಕೋಟಿ ರೂಪಾಯಿಗಳನ್ನು ಪೊಲೀಸರು ಫ್ರೀಜ್ ಮಾಡಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಿಬ್ಬರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಸದ್ಯಕ್ಕೆ ಬಂಧಿತ ಸಯ್ಯದ್ ಅರ್ಫಾತ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದಾವಣಗೆರೆ ಪೊಲೀಸರ ಈ ಕಾರ್ಯಾಚರಣೆ, ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ.

ShareTweetSendShare
Join us on:

Related Posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

by admin
February 2, 2026
0

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ -...

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

by Shwetha
February 2, 2026
0

ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ...

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

by Shwetha
February 2, 2026
0

ನವದೆಹಲಿ: ಭಾರತದ ಆರ್ಥಿಕ ಚಿತ್ರಣವನ್ನು ಪ್ರತಿಬಿಂಬಿಸುವ ಮಹತ್ವದ ವರದಿಯೊಂದನ್ನು ನೀತಿ ಆಯೋಗ (Niti Aayog) ಬಹಿರಂಗಪಡಿಸಿದೆ. ದೇಶದ ಆರ್ಥಿಕ ಸ್ಥಿತಿ, ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ ಮತ್ತು...

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್  ವಾಗ್ದಾಳಿ

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್ ವಾಗ್ದಾಳಿ

by Shwetha
February 2, 2026
0

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಸ್ಲಿಮ್ ಸಮುದಾಯದ ಮತಗಳನ್ನು ಪಡೆದು ಗೆದ್ದ ಶಾಸಕರು ಇದೀಗ ಅದೇ ಸಮುದಾಯವನ್ನು ಕಡೆಗಣಿಸುತ್ತಿದ್ದಾರೆ. ಕೋಮುವಾದಿ ವ್ಯಕ್ತಿಯೊಬ್ಬನನ್ನು ವೇದಿಕೆಯಲ್ಲಿ ಕೊಂಡಾಡಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram