26 ರಂದು ಭಾರತ್ ಬಂದ್ : ಬಡಗಲಪುರ ನಾಗೇಂದ್ರ
ಬೆಂಗಳೂರು : 26 ರಂದು ಭಾರತ್ ಬಂದ್ ಗೆ ಸಂಯುಕ್ತ ಕಿಸಾನ್ ಮೋರ್ಚ ಕರೆ ನೀಡಿದೆ. ಬಂದ್ ನ ಹೋರಾಟದ ರೂಪುರೇಷೆಗಳನ್ನ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಸಂಯುಕ್ತ ಹೋರಾಟ ಸಮಿತಿಯ, ರಾಜ್ಯ ಸಂಯೋಜಕ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ವಿಧಾನಸೌಧ ಚಲೋ ಪ್ರತಿಭಟನೆ ಮಾಡುತ್ತಿದ್ದೇವೆ. ಕರ್ನಾಟಕದಲ್ಲಿ ರೈತರ ಹಲವು ಸಮಸ್ಯೆಗಳಿವೆ. ಸರ್ಕಾರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಇನ್ನು 26 ರಂದು ಭಾರತ್ ಬಂದ್ ಗೆ ಸಂಯುಕ್ತ ಕಿಸಾನ್ ಮೋರ್ಚ ಕರೆ ನೀಡಿದೆ. ಬಂದ್ ನ ಹೋರಾಟದ ರೂಪುರೇಷೆಗಳನ್ನ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಕರ್ನಾಟಕದಲ್ಲೂ ಪ್ರತಿಭಟನೆ ಯಶಸ್ವಿ ಮಾಡುತ್ತೆವೆ ಎಂದು ಹೇಳಿದರು.