ಮೂರು ಕಂದಮ್ಮಗಳ ಬಲಿ ಪಡೆಯಿತಾ ರೂಬೆಲ್ಲಾ ಚುಚ್ಚುಮದ್ದು
ಬೆಳಗಾವಿ : ರೂಬೆಲ್ಲಾ ಚುಚ್ಚುಮದ್ದು ಪಡೆದು ಅಸ್ವಸ್ಥಗೊಂಡಿದ್ದ ಮೂವರು ಕಂದಮ್ಮಗಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ರಾಮದುರ್ಗ ತಾಲೂಕಿನಲ್ಲಿ ನಡೆದಿದೆ.
ಬೋಚಬಾಳ ಗ್ರಾಮದ ಪವಿತ್ರಾ ಹುಲಗೂರ್ (13 ತಿಂಗಳು), ಮಧು ಉಮೇಶ್ ಕುರಗುಂದಿ (14 ತಿಂಗಳು) ಹಾಗೂ ಲರಾಮದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಚೇತನ (15 ತಿಂಗಳು) ಮೃತ ಕಂದಮ್ಮಗಳೆಂದು ತಿಳಿದುಬಂದಿದೆ.
ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆಗಮಿಸಿದ್ದ ಸಿಬ್ಬಂದಿ ಈ ಕಂದಮ್ಮಗಳಿಗೆ ಇಂಜೆಕ್ಷನ್ ನೀಡಿದ್ದರು.
ಈ ವೇಳೆ ಅಸ್ವಸ್ಥಗೊಂಡಿದ್ದ ಕಂದಮ್ಮಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿವೆ.