ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅಕ್ರಮ ಹಣ ಸಾಗಾಟ ಹೆಚ್ಚಾಗುತ್ತಿದೆ. ಪೊಲೀಸರು ಕೂಡ ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಂಗಳವಾರ ಒಂದೇ ದಿನ ಬರೋಬ್ಬರಿ 3 ಕೋಟಿ ರೂ. ಹಣ ಪತ್ತೆಯಾಗಿವೆ. ಇತ್ತ ರಾಮನಗರದಲ್ಲಿ ರಾಶಿ ರಾಶಿ ಸೀರೆಗಳು ಪತ್ತೆಯಾಗಿವೆ.
ರಾಮನಗರದ ದ್ಯಾವರಸೇಗೌಡನದೊಡ್ಡಿಯಲ್ಲಿರುವ ಖಾಸಗಿ ಗೋದಾಮಿನಲ್ಲಿ ರಾಶಿರಾಶಿ ಸೀರೆಗಳು ಪತ್ತೆಯಾಗಿವೆ. 10 ಸಾವಿರಕ್ಕೂ ಅಧಿಕ ಸೀರೆಗಳು ಪತ್ತೆಯಾಗಿವೆ. ಮತದಾರರಿಗೆ ಹಂಚಲು ಸೀರೆ ತರಲಾಗಿತ್ತು ಎಂಬ ಆರೋಪ ಕೇಳಿ ಬಂದಿದೆ. ಸ್ಥಳಕ್ಕೆ ಡಿವೈಎಸ್ಪಿ ದಿನಕರ್ ಶೆಟ್ಟಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ಮಾತನಾಡಿದ್ದು, ಸೀರೆ ಸಿಕ್ಕ ಕುರಿತು ತನಿಖೆ ನಡೆಸುತ್ತಿದ್ದೇವೆ. ವಿಆರ್ ಎಲ್ ಗೋದಾಮಿನಲ್ಲಿ ಪತ್ತೆಯಾದ ಸೀರೆಗಳು ಯಾರಿಗೆ ಸೇರಿದ್ದು ಎಂಬುವುದು ತಿಳಿದು ಬಂದಿಲ್ಲ. ಸೀರೆಗಳ ಬಿಲ್ ಹಾಗೂ ಸೀರೆಗಳ ಪ್ರಮಾಣಕ್ಕೆ ಅದು ಹೊಂದಾಣಿಕೆ ಆಗುತ್ತಿಲ್ಲ. ಸೀರೆಗಳ ಕುರಿತು ಲೆಕ್ಕ ಮಾಡಿ ಪ್ರಕರಣ ದಾಖಲಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.