ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್ಒಯು) (Karnataka State Open University) ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ ಯೋಜನೆಯಡಿ 300 ಕೋಟಿ ರೂ. ಗೂ ಅಧಿಕ ಹಣ ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪ ಕೇಳಿ ಬಂದಿದ್ದು, ಮೇಲೆ ಅಧಿಕಾರಿಗಳ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ಪ್ರಕರಣ ದಾಖಲಿಸಿದೆ.
ಮುಕ್ತ ವಿಶ್ವವಿದ್ಯಾಲಯವು ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ ಯೋಜನೆಯನ್ನು ಇಡೀ ದೇಶ ಹಾಗೂ ವಿದೇಶಗಳಲ್ಲಿಯೂ ಆರಂಭಿಸಿದೆ. 2013-14 ಮತ್ತು 2014-15ನೇ ಸಾಲಿನ ಹಣಕಾಸಿನ ವರ್ಷದಲ್ಲಿ ವಿಶ್ವವಿದ್ಯಾಲಯದ ಆಯವ್ಯಯ ವರದಿ ಪರಿಶೀಲನೆ ಸಂದರ್ಭದಲ್ಲಿ ಈ ಸಂಗತಿ ಬೆಳಕಿಗೆ ಬಂದಿದೆ.
ಸಹಭಾಗಿತ್ವ ಸಂಸ್ಥೆಗಳಿಂದ ಜಮೆಯಾಗಬೇಕಿದ್ದ 50 ಕೋಟಿ ರೂ. ಆಯವ್ಯಯ ವರದಿಯಲ್ಲಿ ಕಾಣೆಯಾಗಿರುವುದು ಪತ್ತೆಯಾಗಿದೆ. ವಿದ್ಯಾರ್ಥಿಗಳಿಂದ ದಾಖಲಾತಿ, ಪರೀಕ್ಷೆ ಹಾಗೂ ಇತರ ಶುಲ್ಕವಾಗಿ ಹಣ ಸಂಗ್ರಹಿಸಲಾಗಿತ್ತು. ಶಿಕ್ಷಣ ಸಂಸ್ಥೆಗಳು ಈ ಮೊತ್ತವನ್ನು ಸಂಸ್ಥೆಗಳು ಮುಕ್ತ ವಿಶ್ವವಿದ್ಯಾಲಯಕ್ಕೆ ಜಮೆ ಮಾಡಬೇಕು. ಆದರೆ, ಕೆಲವು ಸಂಸ್ಥೆಗಳು ಮಾಡಿರುವ ಹಣದಲ್ಲಿ ವ್ಯತ್ಯಾಸ ಕಂಡು ಬಂದಿದೆ. 2009-10ರಿಂದ 2012-13ನೇ ಶೈಕ್ಷಣಿಕ ವರ್ಷದಲ್ಲಿಯೂ ಸುಮಾರು 250 ಕೋಟಿ ರೂ. ಜಮಾ ಆಗಿಲ್ಲ ಎನ್ನಲಾಗಿದೆ. 2013-14ರಿಂದ 2014-15ರ ಆರ್ಥಿಕ ವರ್ಷದಲ್ಲಿ 50 ಕೋಟಿ ರೂ. ಕಾಣೆಯಾಗಿದೆ. ಎಂದು ಲೆಕ್ಕಪರಿಶೋಧನೆ ವೇಳೆ ಗೊತ್ತಾಗಿದೆ. ಹೀಗಾಗಿ ತನಿಖೆ ನಡೆಯುತ್ತಿದೆ.