ಮನುಷ್ಯ ತಿಂಗಳಿಗೊಮ್ಮೆ, ಎರಡು ಬಾರಿ ಸಂಪೂರ್ಣ ನಿರಾಹಾರನಾಗಿರಲು ಕಲಿತರೆ ಅನಾರೋಗ್ಯದ ನಿಮಿತ್ತ ವೈದ್ಯರ ಬಳಿ ಹೋಗಬೇಕಾದ ಅಗತ್ಯವಿಲ್ಲ. ಉಪವಾಸವೇ ದೊಡ್ಡ ಚಿಕಿತ್ಸೆ.”
ನಮ್ಮ ಆಯುರ್ವೆದವೂ ಎಲ್ಲ ರೋಗಗಳಿಗೂ ಅಜೀರ್ಣವೆ ಕಾರಣ ಎನ್ನುತ್ತದೆ: “ಅಜೀರ್ಣಪ್ರಭಾವಾ ರೋಗಾಃ.”
ಹೊಟ್ಟೆಕೆಟ್ಟು ಜೀರ್ಣಶಕ್ತಿ ಕಡಿಮೆಯಾದಾಗ ಎಲ್ಲ ರೋಗಗಳೂ ದಾಳಿ ಮಾಡುತ್ತವೆ. ಉಂಡದ್ದೆಲ್ಲ ಕರಗುತ್ತಿರುವ ತನಕ ಯಾವ ರೋಗವೂ ಬರುವುದಿಲ್ಲ. ಹೊಟ್ಟೆ ಹಾಳಾದಾಗ ದೇಹವೂ ಹಾಳಾಗುತ್ತದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಹೊಟ್ಟೆ ಹಾಳಾಗದಂತೆ ಕಾಪಾಡುವ ವಿಧಾನ ಅದಕ್ಕೆ ಪೂರ್ಣ ವಿಶ್ರಾಂತಿ. ಮಲಗಿದಾಗ ಕಣ್ಣಿಗೆ, ಕಿವಿಗೆ, ಇತರ ಇಂದ್ರಿಯಗಳಿಗೆ ವಿಶ್ರಾಂತಿ. ಬೆಳಗ್ಗಿನಿಂದ ರಾತ್ರಿಯ ತನಕವೂ ತಿನ್ನುತ್ತಲೇ ಇದ್ದರೆ, ತಿಂದದ್ದನ್ನು ಬೆಳಗಿನ ತನಕ ಜೀರ್ಣಿಸಿಕೊಳ್ಳಲೂ ಅವಕಾಶ ನೀಡದೆ ಇದ್ದರೆ ಪಚನೆಂದ್ರಿಯಕ್ಕೆ ವಿಶ್ರಾಂತಿಯೇ ಇಲ್ಲ. ಅದು ಸೋತು ಕೈಕಟ್ಟಿ ಕೂತಿತು ಎಂದರೆ ಅಜೀರ್ಣ. ಹಾಗಾಗಿ 15ದಿನಗಳಿಗೊಮ್ಮೆ 24 ಗಂಟೆಗಳ ಕಾಲ ಪೂರ್ಣ ವಿಶ್ರಾಂತಿ ದೊರಕಿತೆಂದರೆ ಈ ಪಚನೆಂದ್ರಿಯ ಮತ್ತೆ ದಕ್ಷವಾಗಿ ಕೆಲಸ ಮಾಡಲು ಸಿದ್ಧವಾಗುತ್ತದೆ.
ಈ ಎಲ್ಲ ದೃಷ್ಟಿಯಿಂದ ಏಕಾದಶಿ ತುಂಬ ಮಹತ್ವದ ದಿನ. ಅಂದು ವಾತಾವರಣದಲ್ಲಿ ಕೂಡ ಒಂದು ವಿಶಿಷ್ಟ ಶಕ್ತಿ ತುಂಬಿರುತ್ತದೆ. ಏಕಾದಶಿಯನ್ನು ‘ಹರಿದಿನ’ ಎಂದು ಕರೆಯುತ್ತಾರೆ. ಅಂದು ವೈಷ್ಣವೀಶಕ್ತಿ ಜಾಗೃತವಾಗಿ ಕೆಲಸ ಮಾಡುತ್ತದೆ ಎನ್ನುವುದು ತಾತ್ಪರ್ಯ.
ಏಕಾದಶಿ ದಿನ ಆಹಾರತ್ಯಾಗ ಮಾಡಬೇಕು. ಆದರೆ ಮನಸ್ಸಿಗೆ ಹೆಚ್ಚು ಆಹಾರ ಕೊಡಬೇಕು. ಹೊಟ್ಟೆ ತುಂಬಿದರೆ ಬುದ್ಧಿ ಕೆಲಸ ಮಾಡೋದಿಲ್ಲ. ಹೀಗೆ ದೇಹ-ಬುದ್ಧಿ ಎರಡನ್ನೂ ಸಮತೋಲನದಲ್ಲಿಡಬೇಕಾಗುತ್ತದೆ. ಆಹಾರವನ್ನು ವರ್ಜಿಸುವುದು ಎಂದರೆ ಬುದ್ಧಿಯನ್ನು ಶುದ್ಧೀಕರಿಸುವುದು, ಚುರುಕುಗೊಳಿಸುವುದು ಎಂದೇ ಅರ್ಥ.
ಸಣ್ಣ ಬೆಂಕಿಯ ಕಿಡಿ ಬಿದ್ದರೂ ಬೆಟ್ಟದಷ್ಟು ರಾಶಿ ಹಾಕಿದ ಹತ್ತಿಯು ಉರಿದು ಬೂಧಿಯಾಗುವಂತೆ ನಮ್ಮ ಎಲ್ಲ ದುಃಖಗಳಿಗೆ ಕಾರಣವಾದ ಜನ್ಮಜನ್ಮಾಂತರದ ಪಾಪರಾಶಿಯು ಏಕಾದಶಿ ಉಪವಾಸ ಮಾಡುವುದರಿಂದ ಭಸ್ಮೀಭೂತವಾಗುತ್ತದೆ.
ಏಕಾದಶಿ ಮಹಿಮೆ
ಜ್ಯೇಷ್ಠ ಶುಕ್ಲ ಪಕ್ಷದ ಏಕಾದಶಿಯಂದು ನಿರ್ಜಲ ಏಕಾದಶಿಯನ್ನು ದೇಶದ ಹಲವೆಡೆ ಆಚರಿಸಲಾಗುತ್ತದೆ. ಪುರಾಣಗಳಲ್ಲೂ ಕೂಡ ಈ ಹಬ್ಬದ ಅಥವಾ ಈ ಪೂಜೆಯ ಮಹತ್ವವನ್ನು ಉಲ್ಲೇಖಿಸಲಾಗಿದೆ. ಒಂದು ವೇಳೆ ಯಾರಿಗಾದರೂ ಸಂವತ್ಸರದ 24 ಏಕಾದಶಿಯನ್ನು ಮಾಡಲು ಸಾಧ್ಯವಾಗದೇ ಇದ್ದರೆ ಒಂದು ನಿರ್ಜಲ ಏಕಾದಶಿಯನ್ನು ಮಾಡಿದರೆ ಸಾಕಂತೆ. ಒಂದು ನಿರ್ಜಲ ಏಕಾದಶಿಯ ಆಚರಣೆಯು 24 ಏಕಾದಶಿ ಆಚರಣೆಗೆ ಸರಿಸಮವಾಗಿದೆ.
. ಹಿಂದೆ ಧರ್ಮನಿಷ್ಠನಾದ ಮಹಿಧ್ವಜನೆಂಬ ರಾಜನಿದ್ದ. ಆತನಿಗೆ ವಜ್ರಧ್ವಜನೆಂಬ ದುಷ್ಟ, ವಂಚಕನೆನಿಸಿದ ತಮ್ಮನಿದ್ದ. ವಜ್ರಧ್ವಜನಿಗೆ ಅಣ್ಣ ಮಹಿಧ್ವಜನನ್ನು ಕಂಡರೆ ಆಗುತ್ತಿರಲಿಲ್ಲ. ಹೀಗಾಗಿ ಆತ ಅಣ್ಣನನ್ನು ಕೊಂದು ಒಂದು ಅಶ್ವಥ್ಥ ಮರದ ಕೆಳಗೆ ಸುಟ್ಟುಹಾಕಿದ. ಈ ರೀತಿಯ ಕೆಟ್ಟಸಾವು ಪಡೆದ ಮಹಿಧ್ವಜ ಪಿಶಾಚಿಯಾದ. ಅದೇ ಗಿಡದ ಮೇಲೆ ಕುಳಿತು ಜನರಿಗೆ ತೊಂದರೆ ಕೊಡುಲು ಆರಂಭಿಸಿದ.
ಒಮ್ಮೆ ಆ ಮಾರ್ಗವಾಗಿ ಧುಮ್ರ ಎಂಬ ಋಷಿಗಳು ಹೋಗುತ್ತಿದ್ದರು. ಅವರಿಗೆ ಆ ಪಿಶಾಚಿ ಯಾರೆಂದು, ಅದಕ್ಕೆ ಈ ಗತಿ ಯಾಕೆ ಬಂದಿದೆ ಎಂಬುದು ತಮ್ಮ ತಪ:ಶಕ್ತಿಯಿಂದ ತಿಳಿಯಿತು. ಅವರು ತಾವೇ ಅಪರಾ ಏಕಾದಶಿ ವ್ರತ ಆಚರಿಸಿ ದ್ವಾದಶಿಯಂದು ಆ ವ್ರತದ ಪುಣ್ಯವನ್ನು ಪಿಶಾಚಿಯಾಗಿದ್ದ ಮಹಿಧ್ವಜನಿಗೆ ಧಾರೆ ಎರೆದರು. ಮಹಿಧ್ವಜ ಪಿಶಾಚ ರೂಪದಿಂದ ಮುಕ್ತಿಹೊಂದಿದ.
ಈ ವ್ರತದ ಆಚರಣೆಯಿಂದ ಬ್ರಹ್ಮಹತ್ಯಾ ದೋಷ, ಭೂತಬಾಧೆ, ದುಷ್ಟಯೋನಿಯಲ್ಲಿ ಜನನ, ಪರನಿಂದೆ ಇತ್ಯಾದಿ ಪಾಪಗಳಿಂದ ಮುಕ್ತಿ ದೊರೆಯುತ್ತದೆ.
ಪರಸ್ತ್ರೀ ಮೋಹದಿಂದ, ಸುಳ್ಳುಸಾಕ್ಷಿ ಯಿಂದ, ಮೋಸಮಾಡಿದ್ದರಿಂದ, ಸುಳ್ಳು ಹೇಳಿದ್ದರಿಂಧ, ಅನ್ಯಥಾ ವಾದದಿಂದ, ಅಭಕ್ಷ ಭಕ್ಷಣದಿಂದ ಅಲ್ಲದೇ ಅನೇಕ ಪಾಪಕರ್ಮಗಳವಶಾತ್ ಪರಿತಪಿಸುತ್ತಿರುವವರು ಈ ವ್ರತಾಚರಣೆಯಿಂದ ಪಾಪಮುಕ್ತಿ ಪಡೆಯುತ್ತಾರೆ. ಯುದ್ಧದಿಂದ ಓಡಿಹೋದ ಕ್ಷತ್ರೀಯ, ಗುರುವಿಗೆ ದ್ರೋಹಬಗೆದ ಶಿಷ್ಯನಿಗೆ ನರಕವೇ ಗತಿ ಆದರೆ ಅಪರಾ ಏಕಾದಶಿ ವ್ರತ ಆಚರಿಸಿದರೆ ಪ್ರಾಯಶ್ಚಿತ್ತವಾಗುತ್ತದೆ.
ಈ ವ್ರತಾಚರಣೆಯಿಂದ ಪುಷ್ಕರ ಕ್ಷೇತ್ರದಲ್ಲಿ ಮೂರುಬಾರಿ ಸ್ನಾನದ ಫಲ, ಗಂಗೆಯಲ್ಲಿ ಮಿಂದು ಪಿಂಡಪ್ರದಾನ ಮಾಡಿದ ಪುಣ್ಯ ಲಭಿಸುತ್ತದೆ.ಸೂರ್ಯ ಮಕರದಲ್ಲಿದ್ದಾಗ ಪ್ರಯಾಗದಲ್ಲಿ ಮಾಘ ಸ್ನಾನ ಮಾಡಿದ ಫಲ, ಶಿವರಾತ್ರಿ ವ್ರತಾಚರಣೆ ಫಲ, ಗುರು ಸಿಂಹದಲ್ಲಿದ್ದಾಗ ಗೋದಾವರಿ ನದಿ ಸ್ನಾನದ ಫಲ, ಕುಂಭದಲ್ಲಿದ್ದಾಗ ಬದರಿ-ಕೇದಾರ ಯಾತ್ರೆಯ ಫಲ, ಸೂರ್ಯಗ್ರಹಣ ಕಾಲದಲ್ಲಿ ಕುರುಕ್ಷೇತ್ರದಲ್ಲಿ ಸ್ನಾನ ಮಾಡಿದ ಫಲ ದೊರೆಯುತ್ತದೆ, ಸ್ವರ್ಣ, ಆನೆ, ಕುದುರೆ, ಇಲ್ಲವೆ ಕರುವಿನೊಂದಿಗೆ ಹಸುವನ್ನು ಭೂಮಿ, ಬಂಗಾರ ಸಹಿತ ದಾನ ಮಾಡಿದ ಫಲ ಈ ವ್ರತದಿಂದ ದೊರೆಯುತ್ತದೆ.
ಏಕಾದಶೀ ವ್ರತಂ ಯಸ್ತು ಭಕ್ತಿಮಾನ್ ಕುರುತೇ ನರಃ
ಸರ್ವ ಪಾಪ ವಿನಿರ್ಮುಕ್ತಃ ವಿಷ್ಣೋರ್ಯತ್ ಮಂದಿರಮ್
-ವಾಯುಪುರಾಣ
ಏಕಭುಕ್ತೇನ ನಕ್ತೇನ ಬಾಲವೃದ್ಧಾತುರಃ ಕ್ಷಿಪೇತ್
ಪಯೋಮೂಲಫಲೈರ್ವಾಪಿ ನ ನಿರ್ದ್ವದಶಿಕೋ ಭವೇತ್
-ಮಾರ್ಕಂಡೇಯ ಪುರಾಣ
ಅಶಕ್ತರು ಧಾನ್ಯವಲ್ಲದ ಹಾಲು ಹಣ್ಣು ಗೆಣಸೀ ಮುಂತಾದ ಆಹಾರ ಸೇವಿಸಿ ಉಪವಾಸ ಮಾಡಬೇಕು ಬೇರೇನನ್ನೂ ತಿನ್ನಬಾರದು.
ಎಂಟು ವರ್ಷದ ಕೆಳಗಿನ ಮಕ್ಕಳು ಎಂಬತ್ತು ವರ್ಷದ ಮೇಲಿನ ವೃದ್ಧರಿಗೆ ಮಾತ್ರ ಉಪವಾಸ ಕಡ್ಡಾಯವಿಲ್ಲ.ಉಳಿದವರಿಗೆ ಏಕಾದಶಿ ವ್ರತ ವಿಹಿತ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ವ್ರತದ ಕ್ರಮ
◆ದಶಮಿಯಂದು ಏಕಾದಶಿ ಸಂಕಲ್ಪ ಮಾಡಬೇಕು.
◆ಏಕಾದಶಿಯಂದು ಉಪವಾಸ ಮತ್ತು ನಿರಂತರ ಹರಿಸ್ಮರಣೆ(ವಿಶೇಷವಾಗಿ ಜಪ, ಭಜನೆ, ಪಾರಾಯಣಗಳು )
◆ದ್ವಾದಶಿಯಂದು ಹರಿನೈವೇದ್ಯ ಸ್ವೀಕರಿಸಿ ಪಾರಣೆ ಮಾಡಿ
ಕೃಷ್ಣಾರ್ಪಣ ಮಾಡಿದರೆ ವ್ರತವು ಸಿದ್ಧಿಸುವುದು.
ಪ್ರತಿಪಕ್ಷದ ಹನ್ನೊಂದನೆಯ ದಿನ ಇಂಥ ಉಪವಾಸವನ್ನು ಆಚರಿಸುತ್ತಾರೆ. ಇಂಥ ಉಪವಾಸದೀಕ್ಷೆಯ ಮಹತ್ವದ ಬಗೆಗೆ ಪುರಾಣಗಳಲ್ಲಿ ಅನೇಕ ಕಥೆಗಳಿವೆ. ಅಂಬರೀಷ ಇಂಥ ಏಕಾದಶಿ ದೀಕ್ಷಿತರಲ್ಲಿ ಒಬ್ಬ.
ಏಕಾದಶಿಯ ದಿನ ಶುದ್ಧನಾಗಿ ನಿರಾಹಾರದಿಂದಿದ್ದು, ದ್ವಾದಶಿಯಂದು ಬೆಳಿಗ್ಗೆದ್ದು ದೇವರ ಪೂಜೆ ಮಾಡಿ ತೀರ್ಥ ಸ್ವೀಕರಿಸಿ ಆಹಾರ ಸೇವಿಸುವುದು ಅವನ ದೀಕ್ಷೆ.
ಇಂಥ ಒಂದು ಘಟನೆಯ ಮೂಲಕ ಅಂಬರೀಷನ ಉಪವಾಸದ ಮಹತ್ವ, ಭಗವದ್ ಭಕ್ತಿಯ ಮಹತ್ವ ಇವೆರಡನ್ನೂ ಶುಕಾಚಾರ್ಯರು ಭಾಗವತದಲ್ಲಿ ವಿವರಿಸಿದ್ದಾರೆ.
ಒಂದು ಏಕಾದಶಿ. ಅಂಬರೀಷ ಉಪವಾಸವನ್ನಾಚರಿಸಿ ಮರುದಿನ ಬೆಳಗ್ಗೆದ್ದು ಮುಹೂರ್ತ ದಾಟುವುದರೊಳಗೆ ಪಾರಣೆ ಮಾಡಬೇಕು ಎನ್ನುವಷ್ಟರಲ್ಲಿ ದೂರ್ವಾಸರು ಅತ್ತ ಬಂದರು. ಅಂಬರೀಷ ಅವರನ್ನೂ ಪಾರಣೆಗೆ ಆಹ್ವಾನಿಸಿದ. ದುರ್ವಾಸರು ಮಹಾ ಕೋಪಿಷ್ಠ. “ಸ್ವಲ್ಪ ಕಾದಿರು, ಸ್ನಾನ ಮಾಡಿ ಬರುತ್ತೇನೆ,” ಎಂದು ಹೊರಟು ಹೋದರು.
ದುರ್ವಾಸರು ಇವನ ವ್ರತನಿಷ್ಟೆಯನ್ನು ಪರೀಕ್ಷಿಸಲೆಂದೇ ಬಂದವರು. ಅವರ ಕೋಪವೂ ಒಂದು ಅನುಗ್ರಹವೆ. ಮಕ್ಕಳು, ತಪ್ಪು ಮಾಡಿದಾಗ ದೊಡ್ಡವರು ಶಿಕ್ಷೆ ಕೊಡುವುದಿದೆ. ಅದು ಶಿಕ್ಷೆ ಅಲ್ಲ; ಶಿಕ್ಷಣ. ದುರ್ವಾಸರದೂ ಹಾಗೆಯೆ. ಭಕ್ತರ ಶಿಕ್ಷಣಕ್ಕಾಗಿ ಅವರದೊಂದು ನಾಟಕ.
ಇನ್ನೇನು ಪಾರಣದ ಮುಹೂರ್ತ ದಾಟುತ್ತದೆ. ಆದರೆ ದುರ್ವಾಸರ ಸುಳಿವಿಲ್ಲ. ಬಂದ ಅತಿಥಿಗೆ ಅಪಚಾರವಾಗಬಾರದು; ತನ್ನ ವ್ರತಕ್ಕೂ ಭಂಗ ಬರಬಾರದು. ಹೇಗೆ ನಡೆದುಕೊಳ್ಳಬೇಕು ಎನ್ನುವುದು ಸಮಸ್ಯೆ. ಅಂಬರೀಷನಿಗೆ ಉಭಯಸಂಕಟ.
ಹೊತ್ತು ಮೀರಿದರೆ ಏನು ಮಾಡುವುದು? ವ್ರತಲೋಪವಾಗಬಾರದಲ್ಲ? ಅಂಬರೀಷ ಈ ಸಮಸ್ಯೆಗೆ ಒಂದು ತಾತ್ಕಾಲಿಕ ಪರಿಹಾರ ಕೊಂಡುಕೊಂಡ. ಪಾರಣದ ಸಮಯ ಮೀರುವ ಮುನ್ನ ಊಟದ ಬದಲು ನೀರು ಕುಡಿದು ಬಿಡುವುದು. ನೀರು ಕುಡಿದರೆ ಊಟದ ಫಲವೂ ಆಯಿತು. ಉಪವಾಸದ ಫಲವೂ ಆಯಿತು. ಶಾಸ್ತ್ರಕಾರರು ನೀರನ್ನು ಆಹಾರದ ಪ್ರತಿನಿಧಿಯೂ ಹೌದು, ಉಪವಾಸದ ಪ್ರತಿನಿಧಿಯೂ ಹೌದು ಎಂದು ಒಪ್ಪಿಕೊಂಡಿದ್ದಾರೆ. ನಮ್ಮ ವೈದ್ಯಪದ್ಧತಿಗಳೂ ಇದನ್ನು ಅನುಮೋದಿಸಿವೆ.
ಹೀಗೆ ಯೋಚಿಸಿ ಅಂಬರೀಷ ಮಹಾರಾಜ ನೀರು ಕುಡಿದ. ಅಷ್ಟರಲ್ಲಿ ದುರ್ವಾಸರು ಬಂದರು. ವಿಷಯ ತಿಳಿದು ಸಿಟ್ಟುಗೊಂಡರು” “ನೀನು ಅತಿಥಿಗೆ ಅಪಚಾರ ಮಾಡಿದ್ದೀಯ, ನೀನು ಮೋಸಗಾರ, ನಿನಗೆ ಶಾಪ ಕೊಡುತ್ತೇನೆ,” ಎಂದು ಗುಡುಗಿದರು. ಕೃತ್ಯೆಯನ್ನು ಅಭಿಮಂತ್ರಿಸಿ ಅವನ ಮೇಲೆ ಛೂಬಿಟ್ಟರು. ಅಂಬರೀಷ ಮಹಾಭಗವದ್ ಭಕ್ತ. ಆತ ಭಗವಂತನಿಗೆ ಮೊರೆಹೊಕ್ಕ. ವಿಷ್ಣು ತನ್ನ ಭಕ್ತನ ರಕ್ಷಣೆಗಾಗಿ ಚಕ್ರವನ್ನು ಕಳುಹಿಸಿದ.
ದುರ್ವಾಸರ ಮಂತ್ರ ತಿರುಮಂತ್ರವಾಯಿತು. ವಿಷ್ಣುಚಕ್ರಕ್ಕೆ ಹೆದರಿದ ಕೃತ್ಯೆ ದುರ್ವಾಸರನ್ನೆ ಬೆನ್ನಟ್ಟಿತು. ಇದರಿಂದ ತಪ್ಪಿಸಿಕೊಳ್ಳಲು ದುರ್ವಾಸರು ಬ್ರಹ್ಮನಿಗೆ ಶರಣಾದರು. ತನ್ನನ್ನು ವಿಷ್ಣುಚಕ್ರದಿಂದ ಪಾರುಮಾಡಬೇಕೆಂದು ಪ್ರಾರ್ಥಿಸಿದರು. ಆಗ ಬ್ರಹ್ಮದೇವ ಹೇಳಿದ ಮಾತು: “ನಾರಾಯಣ ಜಗತ್ತಿನ ನಿಯಮಾಶಕ್ತಿ. ಅವನ ಆಜ್ಞೆಯಂತೆ ಚಲಿಸುವ ಭಕ್ತರು ನಾವು. ವಿಷ್ಣುಭಕ್ತನನ್ನು ತಡೆಯುವ ಶಕ್ತಿ ನಮಗಿಲ್ಲ. ನಾನು, ರುದ್ರಾದಿ ಸಮಸ್ತ ದೇವತೆಗಳು ಅವನ ಆಜ್ಞೆಯನ್ನು ತಲೆಯಲ್ಲಿ ಹೊತ್ತು ಬದುಕುವವರು. ಆ ಆಜ್ಞೆಯನ್ನು ಮೀರಿ ನಡೆಯುವ ಶಕ್ತಿ ಯಾರಿಗೂ ಇಲ್ಲ.”
ದುರ್ವಾಸರು ರುದ್ರನಲ್ಲಿಗೆ ಹೋಗಿ ಬೇಡಿದರು. ವಾಸ್ತವವಾಗಿ ದುರ್ವಾಸರು ಸ್ವಯಂ ರುದ್ರಾಂಶಸಂಭೂತರು. ಇದೆಲ್ಲ ಅಂಬರೀಷನ ಭಗವದ್ ಭಕ್ತಿಯ ಯೋಗ್ಯತೆಯ ಆಳವನ್ನು ಪರೀಕ್ಷಿಸಲು ದೊಡ್ಡವರು ಮಾಡಿದ ಒಂದು ನಾಟಕ. ಅದರಲ್ಲಿ ದುರ್ವಾಸರಿಗೆ ದ್ವಿಪಾತ್ರಾಭಿನಯ. ರುದ್ರದೇವರಿಂದಲೂ ನಿರಾಸೆಯ ಉತ್ತರವೆ ಬಂತು, “ಇಂಥ ಬ್ರಹ್ಮಾಂಡಗಳು ಎಷ್ಟೋ ಬಾರಿ ಸೃಷ್ಠಿಯಾಗಿವೆ; ನಾಶವಾಗಿವೆ. ಬ್ರಹ್ಮಾಂಡದಲ್ಲಿ ನೂರಾರು ಬಾರಿ ಸತ್ತು ಹುಟ್ಟುವ ಜೀವಗಳು ನಾವು. ಭಗವಂತನ ಲೀಲಾನಾಟಕದಲ್ಲಿ ನಾವೂ ಚಿಕ್ಕ ಪಾತ್ರಧಾರಿಗಳು. ಅವನು ಸೂತ್ರಧಾರ. ಅವನ ಆಜ್ಞೆಯನ್ನು ಮೀರಿ ನಾವೇನೋ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಿನಗೆ ರಕ್ಷೆ ಬೇಕಿದ್ದರೆ ವಿಷ್ಣುವಿಗೇ ಶರಣಾಗು. ಅವನು ನಿನ್ನನ್ನು ಕಾಪಾಡುತ್ತಾನೆ.”
ದುರ್ವಾಸರು ನೇರ ವಿಷ್ಣುವಿನ ಬಳಿಗೆ ಬಂದರು. “ನಿನ್ನ ಚಕ್ರದಿಂದ ನನ್ನನ್ನು ಪಾರುಮಾಡು,” ಎಂದು ಪ್ರಾರ್ಥಿಸಿಕೊಂಡರು. ಆಗ ವಿಷ್ಣು ಹೇಳಿದ: “ನನ್ನಿಂದಲೂ ಸಾಧ್ಯವಿಲ್ಲ. ಏಕೆಂದರೆ, ನಾನು ಭಕ್ತರ ಪರಾಧೀನ. ನಾನೂ ಅವರ ಮಾತನ್ನು ಮೀರಲಾರೆ. ನಾನೆಂದರೆ ಅವರಿಗೆ ಮೆಚ್ಚು. ಅವರೆಂದರೆ ನನಗೆ ಮೆಚ್ಚು. ನಮ್ಮಿಬ್ಬರ ಹೃದಯವೂ ಒಂದೇ. ಅಂಬರೀಷ ನನ್ನ ಮಹಾಭಕ್ತ. ನನ್ನನ್ನು ಬಿಟ್ಟು ಇನ್ನೊಬ್ಬರನ್ನು ಸ್ಮರಿಸಿದವನಲ್ಲ. ನಾನೂ ಅವನನ್ನು ಬಿಟ್ಟು ಕೊಡಲಾರೆ. ಭಕ್ತರ ಮೇಲೆ ನನಗೂ ಅಂಥ ಗೌರವ. ಅಂಬರೀಷ ಇನ್ನೊಬ್ಬನಿಗೆ ತಲೆಬಾಗಿದವನಲ್ಲ. ಆತನಲ್ಲಿಗೇ ಹೋಗಿ ಕ್ಷಮೆ ಯಾಚಿಸು.”
ದುರ್ವಾಸರು ಮರಳಿ ಅಂಬರೀಷನಲ್ಲಿಗೆ ಬರುತ್ತಾರೆ. “ಅಯ್ಯಾ, ನೀನು ಗೆದ್ದೆ. ನಾನೇ ಸೋತೆ. ತಪ್ಪಾಯಿತು,” ಎಂದು ಕೇಳಿಕೊಳ್ಳುತ್ತಾರೆ. ಅಂಬರೀಷನ ಪ್ರಾರ್ಥನೆಯಂತೆ ವಿಷ್ಣುಚಕ್ರ ಮರಳಿ ಹೋಗುತ್ತದೆ.
ಹೀಗೆ ದುರ್ವಾಸರ ಪ್ರಸಂಗದ ಏಕಾದಶಿಯ ಮಹತ್ವವನ್ನೂ ಭಗವದ್ ಭಕ್ತಿಯ ಮಹಿಮೆಯನ್ನೂ ಭಾಗವತ ವಿವರಿಸುತ್ತದೆ.
ಒಂದು ಮಾಸದಲ್ಲಿ ಬರುವ 30 ತಿಥಿಗಳ ಪೈಕಿ ಇತರ ಎಲ್ಲ 28 ತಿಥಿಗಳ ನಿರ್ಣಯವು ಸೂರ್ಯೋದಯ ಸಮಯಕ್ಕಾದರೆ ಏಕಾದಶಿ ತಿಥಿಯ ನಿರ್ಣಯವು ಸೂರ್ಯೋದಕ್ಕೆ ಸ್ವಲ್ಪ ಮುಂಚಿತವಾಗಿ ಬರುವ ಅರುಣೋದಯ ಸಮಯಕ್ಕಾಗಿದೆ. ಸಂಪ್ರದಾಯ ಭೇದಗಳಿಂದಾಗಿ ಸ್ಮಾರ್ಥ, ಶ್ರೀ ವೈಷ್ಣವ ಮತ್ತು ವೈಷ್ಣವ ಏಕಾದಶಿ ದಿನದ ಆಚರಣೆಯ ಒಮ್ಮೊಮ್ಮೆ ಪರಸ್ಪರ ಒಂದು ದಿನದ ಮಟ್ಟಿಗೆ ವ್ಯತ್ಯಾಸವಾಗಬಹುದಾಗಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಏಕಾದಶಿಗಳ ಹೆಸರುಗಳು ಮತ್ತು ಅವುಗಳ ಫಲ
೧) ಚೈತ್ರ ಶುಕ್ಲ ಏಕಾದಶಿ – ಕಾಮದಾ – ಕೋರಿಕೆಗಳನ್ನು ಪೂರೈಸುತ್ತದೆ.
೨) ಚೈತ್ರ ಬಹುಳ ಏಕಾದಶಿ – ವರೂಧಿನಿ – ಸಹಸ್ರ ಗೋದಾನ ಫಲವು ಲಭಿಸುತ್ತದೆ.
೩) ವೈಶಾಖ ಶುದ್ಧ ಏಕಾದಶಿ – ಮೋಹಿನಿ – ದರಿದ್ರನು ಧನವಂತನಾಗುತ್ತಾನೆ.
೪) ವೈಶಾಖ ಬಹುಳ ಏಕಾದಶಿ – ಅಪರಾ – ರಾಜ್ಯಪ್ರಾಪ್ತಿ
೫) ಜ್ಯೇಷ್ಠ ಶುಕ್ಲ ಏಕಾದಶಿ – ನಿರ್ಜಲ – ಆಹಾರ ಸಮೃದ್ಧಿ
೬) ಜ್ಯೇಷ್ಠ ಬಹುಳ ಏಕಾದಶಿ – ಯೋಗಿನಿ – ಪಾಪಗಳನ್ನು ಹರಿಸುತ್ತದೆ (ಪಾಪಗಳಿಂದ ಮುಕ್ತಗೊಳಿಸುತ್ತದೆ)
೭) ಆಷಾಢ ಶುದ್ಧ ಏಕಾದಶಿ – ದೇವಶಯನಿ – ಸಂಪತ್ ಪ್ರಾಪ್ತಿ – ವಿಷ್ಣುವು ಯೋಗನಿದ್ರೆಗೆ ಜಾರುವ ದಿನ
೮) ಆಷಾಢ ಬಹುಳ ಏಕಾದಶಿ – ಕಾಮಿಕಾ – ಬೇಡಿದ ವರಗಳು ಪ್ರಾಪ್ತಿಯಾಗುತ್ತವೆ.
೯) ಶ್ರಾವಣ ಶುಕ್ಲ ಏಕಾದಶಿ – ಪುತ್ರದಾ – ಸತ್ ಸಂತಾನ ಪ್ರಾಪ್ತಿ
೧೦) ಶ್ರಾವಣ ಬಹುಳ ಏಕಾದಶಿ – ಅಜಾ – ರಾಜ್ಯ, ಪತ್ನೀಪುತ್ರ ಪ್ರಾಪ್ತಿ ಮತ್ತು ಆಪತ್ ನಿವಾರಣೆ
೧೧) ಭಾದ್ರಪದ ಶುದ್ಧ ಏಕಾದಶಿ – ಪರಿವರ್ತನ (ಯೋಗ ನಿದ್ರೆಯಲ್ಲಿ ವಿಷ್ಣುವು ಪಕ್ಕಕ್ಕೆ ಹೊರಳುತ್ತಾನಂತೆ ಹಾಗಾಗಿ ಇದು ಪರಿವರ್ತನ) – ಯೋಗ ಸಿದ್ಧಿ
೧೨) ಭಾದ್ರಪದ ಬಹುಳ ಏಕಾದಶಿ – ಇಂದಿರಾ – ಸಂಪದಗಳು ಮತ್ತು ರಾಜ್ಯ ಪ್ರಾಪ್ತಿಯುಂಟಾಗುತ್ತದೆ.
೧೩) ಆಶ್ವಯುಜ ಶುಕ್ಲ ಏಕಾದಶಿ – ಪಾಪಾಂಕುಶ – ಪುಣ್ಯಪ್ರದವಾದುದು
೧೪) ಆಶ್ವಯುಜ ಬಹುಳ ಏಕಾದಶಿ – ರಮಾ – ಸ್ವರ್ಗಪ್ರಾಪ್ತಿ
೧೫) ಕಾರ್ತೀಕ ಶುಕ್ಲ ಏಕಾದಶಿ – ಪ್ರಬೋಧಿನಿ (ಯೋಗ ನಿದ್ರೆಯಿಂದ ವಿಷ್ಣುವು ಎಚ್ಚರಗೊಳ್ಳುವ ದಿನ) – ಜ್ಞಾನಸಿದ್ಧಿ
೧೬) ಕಾರ್ತೀಕ ಬಹುಳ ಏಕಾದಶಿ – ಉತ್ಪತ್ತಿ – ದುಷ್ಟ ಸಂಹಾರ (ಮುರಾಸುರನನ್ನು ಸಂಹರಿಸಿದ ಕನ್ಯೆಯು ವಿಷ್ಣುವಿನ ಶರೀರದಿಂದ ಜನಿಸಿದ ದಿನ)
೧೭) ಮಾರ್ಗಶಿರ ಶುಕ್ಲ ಏಕಾದಶಿ – ಮೋಕ್ಷದಾ – ಮೋಕ್ಷಪ್ರಾಪ್ತಿ (ಮಾರ್ಗಶಿರ ಶುಕ್ಲ ಏಕಾದಶಿಯು ಧನುರ್ಮಾಸದಲ್ಲಿ ಬಂದರೆ ಅದುವೇ ವೈಕುಂಠ ಏಕಾದಶಿಯಾಗುತ್ತದೆ*)
೧೮) ಮಾರ್ಗಶಿರ ಬಹುಳ ಏಕಾದಶಿ – ವಿಮಲಾ (ಸಫಲಾ) – ಅಜ್ಞಾನ ನಿವೃತ್ತಿ
೧೯) ಪುಷ್ಯ ಶುಕ್ಲ ಏಕಾದಶಿ – ಪುತ್ರದಾ – ಪುತ್ರಪ್ರಾಪ್ತಿ (ಪುಷ್ಯ ಶುಕ್ಲ ಏಕಾದಶಿಯು ಧನುರ್ಮಾಸದಲ್ಲಿ ಬಂದರೆ ಅದುವೇ ವೈಕುಂಠ ಏಕಾದಶಿಯಾಗುತ್ತದೆ*)
*ವೈಕುಂಠ ಏಕಾದಶಿ ಮಾರ್ಗಶಿರ ಅಥವಾ ಪುಷ್ಯ ಮಾಸದಲ್ಲಿ ಬರುತ್ತದೆಂದು ಈ ಮುಂಚೆಯೇ ಹೇಳಿದೆ.
೨೦) ಪುಷ್ಯ ಕೃಷ್ಣ ಏಕಾದಶಿ – ಕಲ್ಯಾಣೀ (ಷಟ್ತಿಲಾ) – ಶಾರೀರಿಕ ಬಾಧೆಗಳಿಂದ ಮುಕ್ತಿ (ತೆಲುಗಿನಲ್ಲಿ ಈತಿ ಬಾಧಾ ನಿವಾರಣಂ ಎಂದು ಹೇಳಲಾಗಿದೆ)
೨೧) ಮಾಘ ಶುಕ್ಲ ಏಕಾದಶಿ – ಕಾಮದಾ (ಜಯಾ) – ಶಾಪವಿಮುಕ್ತಿ
೨೨) ಮಾಘ ಕೃಷ್ಣ ಏಕಾದಶಿ – ವಿಜಯಾ – ಸಕಲ ಕಾರ್ಯ ವಿಜಯ (ಇದು ಭೀಷ್ಮೈಕಾದಶಿ ಎಂದು ಪ್ರಸಿದ್ಧಿಯಾಗಿದೆ)
೨೩) ಫಾಲ್ಗುಣ ಶುಕ್ಲ ಏಕಾದಶಿ – ಆಮಲಕೀ – ಆರೋಗ್ಯ ಪ್ರಾಪ್ತಿ
೨೪) ಫಾಲ್ಗುಣ ಕೃಷ್ಣ ಏಕಾದಶಿ – ಸೌಮ್ಯಾ – ಪಾಪ ವಿಮುಕ್ತಿ
ಲೇಖನ: ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564