ಚಾಲಕನ ನಿಯಂತ್ರ ತಪ್ಪಿ ಬಸ್ ಪಲ್ಟಿ | 31 ಮಂದಿಗೆ ಗಾಯ
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಿಗಿ ಬಸ್ ಪಲ್ಟಿಯಾಗಿರುವ ಘಟನೆ ಹೊಸನಗರ ತಾಲೂಕಿನ ಕರಕೆ ಹಕ್ಲು ಗ್ರಾಮದ ಬಳಿ ನಡೆದಿದೆ.
ಇಂದು (ಶನಿವಾರ) ಬೆಳಗಿನ ಜಾವ 5 ಗಂಟೆಗೆ ಘಟನೆ ಸಂಭವಿಸಿದ್ದು, ಘಟನೆಯಲ್ಲಿ 31 ಜನರು ಗಾಯಗೊಂಡಿದ್ದಾರೆ. ಈ ಬಸ್ ಬೆಂಗಳೂರಿನಿಂದ ಭಟಕಳಕ್ಕೆ ಹೊರಟಿತ್ತು.
ಬಸ್ ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಭಟ್ಕಳಕ್ಕೆ ತೆರಳುತ್ತಿರುವಾಗ, ಬೆಳಗಿನ ಜಾವ ಚಾಲಕನಿಗೆ ನಿದ್ರಾದೇವತೆ ಆವರಿಸಿದ್ದಾಳೆ. ನಿದ್ದೆ ಮಪ್ಪಿನಲ್ಲೇ ಚಾಲಕ ಬಸ್ ಚಲಾಯಿಸುತ್ತಿದ್ದ. ಈ ವೇಳೆ ಬಸ್ ಚಾಲಕನ ನಿಯತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಘಟನೆಯಲ್ಲಿ 31 ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹೊಸನಗರ ಹಾಗೂ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಸಣ್ಣಪುಟ್ಟ ಗಾಯಗಳಾದ ಪ್ರಯಾಣಿಕರು ಪ್ರಥಮ ಚಿಕಿತ್ಸೆ ಪಡೆದು ತಮ್ಮೂರಿಗೆ ವಾಪಸ್ ಆಗಿದ್ದಾರೆ. ಈ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.