ಉತ್ತರ ಪ್ರದೇಶ ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಳೆಯ ಅವಘಡದಲ್ಲಿ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಹತ್ತು ಸಾವುಗಳು ವರದಿಯಾಗಿವೆ. 34 ರಲ್ಲಿ 17 ಜನ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. 12 ಜನ ನೀರಿನಲ್ಲಿ ಮುಳುಗಿದ್ದಾರೆ ಮತ್ತು ಐವರು ಭಾರಿ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ.
ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಇಂದು ರಾಜ್ಯದ ಜನರಿಗೆ ಮುಂದಿನ 24 ಗಂಟೆಗಳ ಕಾಲ ಮನೆಯಲ್ಲೇ ಇರುವಂತೆ ಮತ್ತು ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಒತ್ತಾಯಿಸಿದ್ದಾರೆ. ಮುಂದಿನ 24 ಗಂಟೆಗಳ ಕಾಲ ಜನರು ಒಗ್ಗಟ್ಟಿನಿಂದ ಕಷ್ಟವನ್ನು ಎದುರಿಸಲು ಮತ್ತು ತಮ್ಮ ಮನೆಗಳಲ್ಲಿ ಇರಬೇಕೆಂದು ನಾನು ಒತ್ತಾಯಿಸುತ್ತೇನೆ’ ಎಂದು ಮುಖ್ಯಮಂತ್ರಿ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.
ಹಿಮಾಚಲ ಪ್ರದೇಶ ರಾಜ್ಯದಲ್ಲಿಯೂ ನಿರಂತರ ಮಳೆಯಿಂದ ಭೂಕುಸಿತಗಳು, ಹಠಾತ್ ಪ್ರವಾಹಗಳು, ಮನೆಗಳ ಕುಸಿತ ಸಂಭವಿಸಿದೆ.