ರಾಜ್ಯದಲ್ಲಿ ಕೊರೊನಾ ಮರಣಕೇಕೆ : ಹೆಮ್ಮಾರಿಗೆ 596 ಮಂದಿ ಬಲಿ
ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ತುಸು ಇಳಿಕೆಯಾಗಿದ್ರೂ, ಹೆಮ್ಮಾರಿಯ ಮರಣಕೇಕೆ ಮುಂದುವರೆದಿದೆ.
ರಾಜ್ಯದಲ್ಲಿ ಇಂದು ಬರೋಬ್ಬರಿ 596 ಮಂದಿ ಕೊರೊನಾ ಸೋಂಕಿನಿಂದ ಜೀವಕಳೆದುಕೊಂಡಿದ್ದಾರೆ.
ಇವತ್ತು ರಾಜ್ಯದಲ್ಲಿ 39,305 ಹೊಸ ಪ್ರಕರಣಗಳು ವರದಿಯಾಗಿವೆ. 596 ಜನ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 19 ಲಕ್ಷದ ಗಡಿದಾಟಿದೆ. ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 19,372ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯ ರಾಜಧಾನಿಯಲ್ಲಿ ಇವತ್ತು 16,747 ಹೊಸ ಪ್ರಕರಣಗಳು ವರದಿಯಾಗಿದ್ದು, 374 ಸೋಂಕಿತರು ಸಾವನ್ನಪ್ಪಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 3,52,454 ಸಕ್ರಿಯ ಪ್ರಕರಣಗಳಿವೆ.
ಇನ್ನುಳಿದಂತೆ ಬಾಗಲಕೋಟೆ 968, ಬಳ್ಳಾರಿ 973, ಬೆಳಗಾವಿ 736, ಬೆಂಗಳೂರು ಗ್ರಾಮಾಂತರ 704, ಬೆಂಗಳೂರು ನಗರ 16,747, ಬೀದರ್ 305, ಚಾಮರಾಜನಗರ 623,
ಚಿಕ್ಕಬಳ್ಳಾಪುರ 599, ಚಿಕ್ಕಮಗಳೂರು 362, ಚಿತ್ರದುರ್ಗ 172, ದಕ್ಷಿಣ ಕನ್ನಡ 1,175, ದಾವಣಗೆರೆ 197, ಧಾರವಾಡ 1,006, ಗದಗ 332, ಹಾಸನ 1,800, ಹಾವೇರಿ 214, ಕಲಬುರಗಿ 988, ಕೊಡಗು 534, ಕೋಲಾರ 755,
ಕೊಪ್ಪಳ 412, ಮಂಡ್ಯ 1,133, ಮೈಸೂರು 1,537, ರಾಯಚೂರು 582, ರಾಮನಗರ 337, ಶಿವಮೊಗ್ಗ 820, ತುಮಕೂರು 2,168, ಉಡುಪಿ 855, ಉತ್ತರ ಕನ್ನಡ 885, ವಿಜಯಪುರ 659 ಮತ್ತು ಯಾದಗಿರಿಯಲ್ಲಿ 727 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.