ಬಳ್ಳಾರಿ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಮೃತಪಟ್ಟಿರುವ ಘಟನೆ ಬಳ್ಲಾರಿ ಹೊಸಪೇಟೆಯ ರಾಷ್ಟ್ರೀಯ ಹೆದ್ದಾರಿ 63 ಬಳಿ ನಡೆದಿದೆ. ಘಟನೆಯಲ್ಲಿ 45 ವರ್ಷದ ಗೋವಿಂದಪ್ಪ ಮೃತಪಟ್ಟಿದ್ದಾರೆ. ತಡರಾತ್ರಿ ಅಪಘಾತ ಸಂಭವಿಸಿದೆ.
ಇನ್ನೂ ಘಟನೆಯಿಂದಾಗಿ ಸ್ಥಳದಲ್ಲಿ ರಾತ್ರಿಯಿಡೀ ಉಂಟಾಗಿದ್ದ ಟ್ರಾಫಿಕ್ ಜಾಮ್ ಮುಂಜಾನೆಯಾದರೂ ಕ್ಲಿಯರ್ ಆಗದೇ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿತ್ತು. ಬಳಿಕ ಸ್ಥಳಕ್ಕೆ ದೌಡಾಯಿದ್ದ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಿಸಿ ಸಂಚಾರಮುಕ್ತಗೊಳಿಸಿದರು.