ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೋನ ನಿಯಂತ್ರಣಕ್ಕೆ 4 ‘C’ ಸೂತ್ರ: ಬೇರೆ ದೇಶಗಳ ಯಶಸ್ವೀ ಚಿಕಿತ್ಸಾ ಕ್ರಮ ಅಧ್ಯಯನಕ್ಕೆ ಶೀಘ್ರದಲ್ಲೇ ಸಮಿತಿ ರಚನೆ – ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

admin by admin
July 7, 2020
in Newsbeat, Samagra karnataka, ನ್ಯೂಸ್ ಬೀಟ್, ರಾಜ್ಯ
Share on FacebookShare on TwitterShare on WhatsappShare on Telegram

ಕೊರೋನ ನಿಯಂತ್ರಣಕ್ಕೆ 4 ‘C’ ಸೂತ್ರ: ಬೇರೆ ದೇಶಗಳ ಯಶಸ್ವೀ ಚಿಕಿತ್ಸಾ ಕ್ರಮ ಅಧ್ಯಯನಕ್ಕೆ ಶೀಘ್ರದಲ್ಲೇ ಸಮಿತಿ ರಚನೆ – ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಕೊರೋನ ನಿಯಂತ್ರಣಕ್ಕೆ ರಾಜ್ಯದ ಕ್ರಮಗಳನ್ನು ಶ್ಲಾಘಿಸಿದ ಕೇಂದ್ರದ ನಿಯೋಗ

Related posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026
ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026

ಬೆಂಗಳೂರು – ಜುಲೈ 7, 2020: ಕೊರೋನ ನಿಯಂತ್ರಣಕ್ಕಾಗಿ 5T ಸೂತ್ರ ಅನುಸರಿಸುತ್ತಾ ಬಂದಿರುವ ಕರ್ನಾಟಕದಲ್ಲಿ ಇನ್ನುಮುಂದೆ ಇದರ ಜೊತೆಗೆ 4 C ಸೂತ್ರ ಅನುಸರಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿಂದು ಜ಼ೂಮ್ ಮೂಲಕ ಮಾಧ್ಯಮಗೋಷ್ಠಿ ನಡೆಸಿದ ಅವರು ಕೊರೋನ ಸೋಂಕಿತರ ಸಾವಿನ ಪ್ರಮಾಣ 1% ಗಿಂತ ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.

ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಆನ್‌ಲೈನ್ ಮೂಲಕ ಸುದ್ದಿಗೋಷ್ಠಿ ನಡೆಸಿದ ಸಚಿವರು, ಜಾಗತಿಕ ಮಟ್ಟದಲ್ಲಿ ಯಶಸ್ವಿಯಾಗಿ ಕೈಗೊಳ್ಳಲಾಗಿರುವ ಚಿಕಿತ್ಸಾ ಕ್ರಮಗಳನ್ನು ಅಧ್ಯಯನ ಮಾಡಲು ಹಾಗೂ ಅವುಗಳನ್ನು ನಮ್ಮ ರಾಜ್ಯದಲ್ಲೂ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಶೀಘ್ರದಲ್ಲೇ ತಜ್ಞರ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಅವರು ಹೇಳಿದರು.

ಕೊರೋನ ನಿಯಂತ್ರಣಕ್ಕೆ 4 C ಸೂತ್ರ

4C ಸೂತ್ರ (Confidence, Collaboration, Communication, Compassion) ಆತ್ಮ ವಿಶ್ವಾಸ, ಸಹಭಾಗಿತ್ವ, ಸಂವಹನ ಮತ್ತು ಅನುಕಂಪಗಳನ್ನು ಅನುಸರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿರುವ ಸಚಿವರು, ಪ್ರಸ್ತುತ ಕೋವಿಡ್ ಸೇವೆಯಲ್ಲಿ ತೊಡಗಿರುವ ಆರೋಗ್ಯಯೋಧರು ಕಳೆದ 4 ತಿಂಗಳಿನಿಂದ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು ಒತ್ತಡಕ್ಕೆ ಒಳಗಾಗಿದ್ದಾರೆ. ಅವರಿಗೆ ವಿಶ್ರಾಂತಿಯ ಅಗತ್ಯವಿದ್ದು, ಖಾಸಗಿ ವಲಯಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಇರುವ ಪರಿಣಿತರು ಕೆಲದಿನಗಳ ಮಟ್ಟಿಗೆ ಅವರ ಸ್ಥಾನ ತುಂಬಬೇಕಿದೆ. ಸರ್ಕಾರ, ನಾಗರಿಕರು ಮತ್ತು ಸಂಘಸಂಸ್ಥೆಗಳ ಸಹಭಾಗಿತ್ವದಿಂದ ಕೊರೋನ ಮಣಿಸಲು ಸಾಧ್ಯ ಎಂದು ಸಚಿವರು ಹೇಳಿದರು. ಇದಕ್ಕಾಗಿ ನಾಳೆಯೇ ಸರ್ಕಾರ ಆಪ್ ಬಿಡುಗಡೆ ಮಾಡಲಿದ್ದು ಸ್ವಯಂ ಪ್ರೇರಿತರಾಗಿ ನೋಂದಾಯಿಸಿಕೊಳ್ಳಬಹುದು ಮತ್ತು ಕೊರೋನ ವಿರುದ್ಧದ ಈ ಹೋರಾಟದಲ್ಲಿ ಸಕ್ರಿಯರಾಗಿ ಭಾಗವಹಿಸಬಹುದು ಎಂದು ಹೇಳಿದರು. ಕೊರೋನ ಸೋಂಕಿತರನ್ನು ಅಸ್ಪೃಶ್ಯರಂತೆ ನೋಡಬಾರದು. ಸರಿಯಾದ ಮಾಹಿತಿ ಪಡೆದುಕೊಂಡು ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ಮೂಲಕಕೊರೋನ ಮಣಿಸಬೇಕು ಎಂದು ಡಾ.ಸುಧಾಕರ್ ತಿಳಿಸಿದರು.

ಕೇಂದ್ರದ ಶ್ಲಾಘನೆ

ಕೇಂದ್ರ ಸರ್ಕಾರದ ಉನ್ನತಮಟ್ಟದ ನಿಯೋಗ ಇಂದು ರಾಜ್ಯದ ಕೋವಿಡ್ ನಿಯಂತ್ರಣಾ ಕ್ರಮಗಳನ್ನು ಪರಿಶೀಲಿಸಿದ್ದು ರಾಜ್ಯದ ಕ್ರಮಗಳನ್ನು ಶ್ಲಾಘಿಸಿದ್ದಾರೆ ಎಂದು ಸಚಿವ ಸುಧಾಕರ್ ತಿಳಿಸಿದರು. ಕೇಂದ್ರದ ನಿಯೋಗದ ಶಿಫಾರಸ್ಸಿನಂತೆ ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಟೆಸ್ಟ್ ನಡೆಸುವ ಅವಶ್ಯಕತೆ ಇದ್ದು, ಪಾಸಿಟಿವ್ ಪ್ರಕರಣಗಳು ಹೆಚ್ಚಾಗಲಿವೆ. ಜನರು ಆತಂಕಪಡದೆ ಮುನ್ನೆಚ್ಚರಿಕೆವಹಿಸಬೇಕು ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು. ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಹೆಚ್ಚು ಆಂಟಿಜೆನ್ ಟೆಸ್ಟ್ ನಡೆಸಬೇಕು, ಹೆಚ್ಚು ಜನ ಸೇರುವುದನ್ನು ನಿರ್ಭಂಧಿಸಬೇಕು ಎಂಬುದು ಕೇಂದ್ರ ನಿಯೋಗದ ಅಭಿಪ್ರಾಯವಾಗಿದೆ ಎಂದು ಸಚಿವರು ತಿಳಿಸಿದರು.

Tags: #CoronaUpdatesInIndiaCoronaUpdateskarnatakaDr. K SudhakarkarnatakaViralcoronavirus
ShareTweetSendShare
Join us on:

Related Posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram