ಮಂಡ್ಯದ 5 ರೂ. ಡಾಕ್ಟರ್ ಎಂದೇ ಖ್ಯಾತರಾಗಿರುವ ವೈದ್ಯರಾದ ಶಂಕರೇಗೌಡ ಅವರಿಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ..
ನಿನ್ನೆ ಸಂಜೆ ಶಂಕರೇಗೌಡ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಕೂಡಲೇ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯದ ಮೂರು ರಕ್ತನಾಳಗಳು ಬ್ಲಾಕ್ ಆಗಿದ್ದರಿಂದ ತಾತ್ಕಾಲಿಕವಾಗಿ ಸ್ಟಂಟ್ ಅಳವಡಿಸಲಾಗಿದೆ.
ಆದರೆ ಒಂದು ವಾರದ ಬಳಿಕ ಬೈಪಾಸ್ ಸರ್ಜರಿ ಮಾಡುವ ಸಾಧ್ಯತೆ ಇದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅದೃಷ್ಟವಶಾತ್ ಶಂಕರೇಗೌಡರು ಪ್ರಾಣಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಚರ್ಮ ಮತ್ತು ಲೈಂಗಿಕ ರೋಗ ತಜ್ಞರಾಗಿ ಸುಮಾರು ವರ್ಷಗಳಿಂದ ನಿರಂತರವಾಗಿ ಬಡ ಜನರಿಗೆ ಅನುಕೂಲವಾಗುವಂತೆ ಸೇವೆ ಸಲ್ಲಿಸುತ್ತಿರುವ ಶಂಕರೇಗೌಡರು 5 ರೂಪಾಯಿ ಡಾಕ್ಟರ್ ಎಂದೇ ಚಿರಪರಿಚಿತರು. ಇವರು ಸ್ವಗ್ರಾಮ ಶಿವಳ್ಳಿಯಲ್ಲಿ ಉಚಿತವಾಗಿ ರೋಗಿಗಳಿಗೆ ಪರೀಕ್ಷೆ ಮಾಡುತ್ತಿದ್ದರು. ಮಂಡ್ಯದ ತಮ್ಮ ಕ್ಲಿನಿಕ್ನಲ್ಲಿ ಮಾತ್ರ ಪ್ರತಿಯೊಬ್ಬರಿಗೆ 5 ರೂಪಾಯಿ ಪಡೆಯುತ್ತಾರೆ.