ಬಸ್ ಸಂಚಾರ ಸ್ಥಗಿತ : ಬೆಳಗಾವಿ ವಿಭಾಗಕ್ಕೆ 50 ಲಕ್ಷ ರೂ. ನಷ್ಟ
ಬೆಳಗಾವಿ : ಮಹಾರಾಷ್ಟ್ರದಲ್ಲಿ ಶಿವಸೇನಾ ಕಾರ್ಯಕರ್ತರ ಪುಂಡಾಟಿಕೆ ಹಿನ್ನೆಲೆ ಕರ್ನಾಟಕ ಮಹಾರಾಷ್ಟ್ರ ನಡುವಿನ ಬಸ್ ಸಂಚಾರವನ್ನ ಸ್ಥಗಿತವಾಗಿದ್ದು, ಇದರಿಂದ ಬೆಳಗಾವಿ ವಿಭಾಗಕ್ಕೆ 50 ಲಕ್ಷ ರುಪಾಯಿ ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕೆಎಸ್ ಆರ್ ಟಿಸಿ ಡಿಸಿ ಮಹದೇವಪ್ಪ ಮುಂಜಿ ಮಾಹಿತಿ ನೀಡಿದ್ದು, ಶಿವಸೇನೆಯವರು ಕರ್ನಾಟಕದ ಬಸ್ಗಳನ್ನು ತಡೆದು ಮಸಿ ಬಳೆಯುತ್ತಿದ್ದಾರೆ. ಇದರ ಜೊತೆಗೆ ಕೊಲ್ಲಾಪುರದಲ್ಲಿ ವಾಣಿಜ್ಯ ಮಳಿಗೆಗಳ ಮೇಲಿನ ಕನ್ನಡ ನಾಮಫಲಕಗಳಿಗೂ ಮಸಿ ಬಳೆಯುತ್ತಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಬಸ್ ಗಳ ಸಂಚಾರವನ್ನ ಸ್ಥಗಿತಗೊಳಿಸಲಾಗಿದೆ. ಇದರಿಂದ 50 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದ ಪ್ರಯಾಣಿಕರಿಗೆ ತೊಂದರೆ ಆಗಬಾರದೆಂದು ಈಗಾಗಲೇ ಕೊಲ್ಲಾಪುರ ವಿಭಾಗೀಯ ನಿಯಂತ್ರಣಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರು ಅಲ್ಲಿನ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಸ್ ಸಂಚಾರ ಆರಂಭಿಸುವ ಬಗ್ಗೆ ತಿಳಿಸುವುದಾಗಿ ಹೇಳಿದ್ದಾರೆ ಎಂದು ಮಾಹಿತಿ ನೀಡಿದ್ರು.