Covid 19 | ಸಿನಿಮಾ ಮಂದಿ ಮೇಲೆ ಕರುಣೆ ತೋರದ ಸರ್ಕಾರ
ಬೆಂಗಳೂರು : ನೈಟ್ ಕರ್ಫ್ಯೂ ರದ್ದು ಮಾಡಿ ಹೋಟೆಲ್ ಗಳಿಗೆ ಮುಕ್ತ ಅವಕಾಶವನ್ನು ಕೊಟ್ಟಿರುವ ರಾಜ್ಯ ಸರ್ಕಾರ ಸಿನಿಮಾ ಮಂದಿ ಮೇಲೆ ಮಾತ್ರ ಕರುಣೆ ತೋರಿಸಿಲ್ಲ. ಮಲ್ಟಿಪ್ಲೆಕ್ಸ್, ಥೀಯೇಟರ್ ಗಳಿಗೆ 50 : 50 ರೂಲ್ಸ್ ಮುಂದುವರೆಸಿದೆ. 50% rules continue for film in karnataka saaksha tv
ಕೊರೊನಾ ನಿಯಂತ್ರಣಕ್ಕೆ ಜಾರಿಯಲ್ಲಿದ್ದ ಶೇ 50ರಷ್ಟು ರೂಲ್ಸ್ಗೆ ಎಲ್ಲೆಡೆಯಿಂದ ವಿರೋಧ ವ್ಯಕ್ತವಾಗಿತ್ತು.
ಮುಖ್ಯವಾಗಿ 50 : 50 ರೂಲ್ಸ್ ಸಡಿಲಿಕೆ ಮಾಡುವಂತೆ ಹೋಟೆಲ್ ಉದ್ಯಮ, ಮದ್ಯ ಮಾರಾಟ ಉದ್ಯಮ, ಸಿನಿಮಾ, ನಾಟಕ ರಂಗಗಳಿಂದ ಬೇಡಿಕೆಗಳು ಬಂದಿದ್ದವು.
ಈ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಸಡಿಲಿಕೆ, ಬೆಂಗಳೂರಲ್ಲಿ ಶಾಲಾರಂಭ ಸೇರಿದಂತೆ ವಿವಿಧ ವಿಷಯಗಳ ಕುರಿತಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಸಭೆ ನಡೆಯಿತು.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ ಸಚಿವರು, ಹಿರಿಯ ಅಧಿಕಾರಿಗಳು, ಕೋವಿಡ್ ತಜ್ಞರು ಭಾಗವಹಿಸಿದ್ದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಜನವರಿ 31 ರಿಂದ ನೈಟ್ ಕರ್ಫ್ಯೂ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜೊತೆಗೆ ಜನವರಿ 31 ರಿಂದ ಬಸ್ ವ್ಯವಸ್ಥೆ ಎಂದಿನಂತೆ ಇರಲಿದ್ದು, ಹೋಟೆಲ್, ರೆಸ್ಟೋರೆಂಟ್ ಗಳಿಗೆ ಯಾವುದೇ ನಿರ್ಬಂಧ ಇಲ್ಲ ಎಂದು ತಿಳಿಸಿ ಗುಡ್ ನ್ಯೂಸ್ ಕೊಟ್ಟರು.
ಆದೇ ಗುಡ್ ನ್ಯೂಸ್ ನಿರೀಕ್ಷೆಯಲ್ಲಿದ್ದ ಥಿಯೇಟರ್, ಮಲ್ಟಿಪ್ಲೆಕ್ಸ್ ಗಳಿಗೆ ಮಾತ್ರ ಗುಡ್ ನ್ಯೂಸ್ ನೀಡಲಿಲ್ಲ. ಅವುಗಳಿಗೆ ಸದ್ಯ ಜಾರಿಯಲ್ಲಿರುವ 50 : 50 ರೂಲ್ಸ್ ಮುಂದುವರೆಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.