ಮುಂಬೈನಲ್ಲಿ ಮೊದಲೇ ಕೊರೊನಾ ಭೀಕರತೆಯಿಂದ ಜನರು ನಲುಗಿಹೋಗಿದ್ದಾರೆ. ಮತ್ತೊಂದೆಡೆ ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ದಾರಾಕಾರ ಮಳೆಯಿಂದಾಗಿ ಅನೇಕ ಅವಾಂತರಗಳು ಸೃಷ್ಟಿಯಾಗಿವೆ. ಧಾರಾಕಾರ ಮಳೆಗೆ ನಗರದಲ್ಲಿನ ೫ ಅಂತಸ್ತಿನ ಕಟ್ಟಡವೊಮದು ಕುಸಿದ ಪರಿನಾಮ ೬ ಮಂದಿ ಮೃತಪಟ್ಟಿದ್ದಾರೆ. ನಿನ್ನೆ ಮಧ್ಯಾನದ ವೇಳೆಗೆ ಭಾನುಷಾಲಿ ಬ್ಯುಲ್ಡಿಂಗ್ ನಲ್ಲಿ ಈ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ದೌಡಾಯಿಸಿದ್ದ ಎನ್ ಡಿ ಆರ್ ಎಫ್ ತಂಡ ನಿರಂತರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಇದೀಗ ೬ ಜನರು ಮೃತಪಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ತೀವ್ರವಾಗಿ ಗಾಯಗೊಮಡಿದ್ದ ಮೂವರನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನೂ ಕೆಲವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸ್ತಳದಲ್ಲಿ ಅಗ್ನಿ ಸಾಮಕ ದಳ ವಾಹನಗಳು ಹಾಗೂ ಆಂಬ್ಯುಲೆನ್ಸ್ ಸಹ ಮೊಕ್ಕಾಂ ಹೂಡಿವೆ.
ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ
ಟಿ20 ವಿಶ್ವಕಪ್ನಲ್ಲಿ ಸೆಮಿಫೈನಲ್ ಹಂತ ತಲುಪಲು ವಿಫಲವಾದ ಹಿನ್ನೆಲೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ತನ್ನ ಆಟಗಾರರ ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಟೂರ್ನಿಯಲ್ಲಿ ನಿರಾಶಾಜನಕ ಪ್ರದರ್ಶನ...








