ಲಖನೌ: ಉತ್ತರ ಪ್ರದೇಶದಲ್ಲಿ 6 ತಿಂಗಳ ಕಾಲ ಯಾವುದೇ ರೀತಿಯ ಮುಷ್ಕರ, ಪ್ರತಿಭಟನೆ, ಧರಣಿ ನಡೆಸದಂತೆ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ನಿಷೇಧ ಹೇರಿದೆ.
ಈ ನಿಯಮ ಸರ್ಕಾರದ ಅಡಿಯಲ್ಲಿರುವ ಸರ್ಕಾರಿ ಇಲಾಖೆಗಳು, ನಿಗಮಗಳು ಮತ್ತು ಪ್ರಾಧಿಕಾರಗಳಿಗೆ ಅನ್ವಯಿಸಲಿದೆ. ಇದನ್ನು ಮೀರಿ ಮುಷ್ಕರ ನಡೆಸಿದರೆ ವಾರಂಟ್ ಇಲ್ಲದೆ ಬಂಧಿಸಲಾಗುವುದು ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಿಬ್ಬಂದಿ ಡಾ.ದೇವೇಶ್ ಚತುರ್ವೇದ್ ಆದೇಶ ಹೊರಡಿಸಿದ್ದಾರೆ.
ಎಸ್ಮಾ ಕಾಯ್ದೆ ಜಾರಿಯಾದ ನಂತರ ಯಾವುದೇ ನೌಕರರು ಮುಷ್ಕರ ಅಥವಾ ಪ್ರತಿಭಟನೆ ಮಾಡುವ ಮೂಲಕ ಕಾಯ್ದೆ ಉಲ್ಲಂಘಿಸಿದಲ್ಲಿ ವಾರಂಟ್ ಇಲ್ಲದೇ ಬಂಧಿಸಲಾಗುವುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು.