ಬೆಂಗಳೂರು: ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ವೈರಸ್ ಇದೀಗ ಕನ್ನಡಿಗರ ನಿದ್ದೆಗೆಡಿಸಿದೆ. ಜನರು ಕೊರೊನಾಗೆ ಹೆದರಿ ಆರೋಗ್ಯ ಇಲಾಖೆಯ ಸಹಾಯವಾಣಿಗೆ ಕರೆಗಳ ಸುರಿಮಳೆಗೈದಿದ್ದಾರೆ. ಸಾರ್.. ನಂಗೆ ಎರಡು ದಿನದಿಂದ ಶೀತ, ಜ್ವರ, ಕೆಮ್ಮು. ನನಗೆ ಕೊರೊನಾ ಇದೆಯಾ?. ಇದೆಲ್ಲ ಕೊರೊನಾ ವೈರಸ್ ಲಕ್ಷಣಗಳಾ ಎಂದು ಆರೋಗ್ಯ ಇಲಾಖೆಯ ಸಹಾಯವಾಣಿಗೆ ಕರೆಗಳ ಮೇಲೆ ಕರೆಗಳು ಬರುತ್ತಿವೆ. ಸಹಾಯವಾಣಿಗೆ ಇದೂವರೆಗೆ ಆರೂವರೆ ಸಾವಿರ ಕರೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ಕೇವಲ 3-4 ತಿಂಗಳಲ್ಲಿ ಇಷ್ಟೊಂದು ಕರೆ ಬಂದಿದ್ದು, 104 ಸಹಾಯವಾಣಿಯ ಸಿಬ್ಬಂದಿಗೆ ಈಗ ಕೊರೊನಾ ಬಗ್ಗೆ ಮಾಹಿತಿ ಕೊಡೋದೆ ಕೆಲಸವಾಗಿದೆ.
ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!
ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...








