ಹಿಜಾಬ್ ಗೆ ಅವಕಾಶ | 7 ಜನರ ಅಮಾನತು
ಗದಗ: SSLC ಪರೀಕ್ಷೆಗಳು ಪ್ರಾರಂಭವಾಗಿದ್ದು, ಮೊದಲ ದಿನದ ಪರೀಕ್ಷೆಯಲ್ಲಿ ವಿದ್ಯರ್ಥಿನಿಯರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದ 7 ಜನರನ್ನು ಅಮಾನತು ಮಾಡಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಮಾರ್ಚ 28 ರಂದು ನಡೆದ SSLC ಪ್ರಥಮ ಭಾಷೆಯ ಪರೀಕ್ಷೆ ನಡೆದಿದೆ. ಈ ಪರೀಕ್ಷೆಯನ್ನು ನಗರದ ಪರೀಕ್ಷಾ ಕೇಂದ್ರವಾದ ಸಿ.ಎಸ್. ಪಾಟೀಲ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರೆದಿದ್ದರು. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು ನೀಡಿದ ವರದಿ ಹಿನ್ನೆಲೆ ಐವರು ಮೇಲ್ಚಿಚಾರಕರು, ಇಬ್ಬರು ಅಧೀಕ್ಷಕರು ಸೇರಿ 7 ಜನರನ್ನು ಗದಗ ಡಿಡಿಪಿಐ ಜಿ.ಎಮ್. ಬಸವಲಿಂಗಪ್ಪ ಅಮಾನತು ಮಾಡಿದ್ದಾರೆ.
ಪರೀಕ್ಷಾ ಕೇಂದ್ರದ ಅಧೀಕ್ಷಕರು ಕೆಬಿ ಭಜಂತ್ರಿ, ಬಿಎಸ್ ಹೊನ್ನಗುಡಿ ಹಾಗೂ ಕೊಠಡಿ ಮೇಲ್ವಿಚಾರಕರಾದ ಎಸ್.ಜಿ. ಗೋಡಕೆ, ಎಸ್.ಎಸ್. ಗುಜಮಾಗಡಿ, ವಿ.ಎನ್. ಕಿವುಡರ್, ಎಸ್.ಯು. ಹೊಕ್ಕಳದ, ಎಸ್.ಎಮ್. ಪತ್ತಾರ ಅವರನ್ನೂ ತಕ್ಷಣ ಅಮಾನತು ಮಾಡಲು.