ಬೆಂಗಳೂರು: ಪ್ರವಾಹದಿಂದ ಹಾನಿಗೊಳಗಾಗಿರುವ 6,648 ಶಾಲೆಗಳ ಮರು ನಿರ್ಮಾಣಕ್ಕೆ 758 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ರಾಜ್ಯಪಾಲರ ಭಾಷಣದ ಮೇಲೆ ವಂದನಾ ನಿರ್ಣಯ ಸಲ್ಲಿಸುವ ಸಲುವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾತನಾಡುತ್ತಾ, ರಾಜ್ಯದಲ್ಲಿ 7,770 ಶಾಲಾ ಕೊಠಡಿಗಳು ಬಿದ್ದು ಹೋಗಿವೆ. ಅವುಗಳ ರಿಪೇರಿಗೆ 1500 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಬೇಕಾಗಿದೆ ಎಂದ್ರು. ಇದಕ್ಕೆ ಉತ್ತರಿಸಿದ ಸಚಿವ ಸುರೇಶ್ ಕುಮಾರ್ ಅವರು, 7,770 ಕೊಠಡಿಗಳ ದುರಸ್ತಿಗೆ 199.50 ಕೋಟಿ ರೂ.ಗಳ ಬಿಡುಗಡೆ ಮಾಡಲಾಗಿದೆ. ಇನ್ನಷ್ಟು ಶಾಲೆಗಳ ಪುನರ್ ನಿರ್ಮಾಣಕ್ಕೆ 750 ಕೋಟಿ ನೀಡಲಾಗಿದೆ. ಈಗಾಗಲೇ ಶಾಲೆಗಳ ಪುನರ್ ನಿರ್ಮಾಣ ಕಾರ್ಯವು ಆರಂಭವಾಗಿದೆ ಎಂದರು.
ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ
ರಾಜ್ಯ ರಾಜಕಾರಣದಲ್ಲಿ ಬಿಜೆಪಿಯ ಪಾದಯಾತ್ರೆ ಮತ್ತು ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಂಭ್ರಮದ ನಡುವೆ ಹೊಸ ವಾಕ್ಸಮರ ಶುರುವಾಗಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ...








