‘777 ಚಾರ್ಲಿ’ ನಾಯಕನ ಪಾತ್ರಕ್ಕೆ ಮೊದಲ ಆಯ್ಕೆ ರಕ್ಷಿತ್ ಶೆಟ್ಟಿ ಆಗಿರಲಿಲ್ಲ..!
ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾದ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದ್ದು, ಒಳ್ಳೆ ರೆಸ್ಪಾನ್ಸ್ ಪಡೆದುಕೊಂಡಿದೆ.. ಸಿನಿಮಾ ರಿಲೀಸ್ ಗಾಗಿ ರಕ್ಷಿತ್ ಅಭಿಮಾನಿಗಳು ಕಾಯುತ್ತಿದ್ದಾರೆ.. ಸಿನಿಮಾದಲ್ಲಿ ನಾಯಿ ಹಾಗೂ ಮನುಷ್ಯನ ನಡುವಿನ ಸಂಬಂಧದ ಬಗ್ಗೆ ಕಥೆ ಇರುವುದು ಟೀಸರ್ ಪೋಸ್ಟರ್ ಗಳಿಂದ ಸ್ಪಷ್ಟವಾಗಿಯೇ ಗೊತ್ತಾಗ್ತಿದೆ.. ಆದ್ರೆ ಈ ಸಿನಿಮಾಗೆ ರಕ್ಷಿತ್ ಶೆಟ್ಟಿ ಮೊದಲ ಆಯ್ಕೆ ಆಗಿರಲಿಲ್ಲ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ..
ಹೌದು.. ಈ ಸಿನಿಮಾಗೆ ರಕ್ಷಿತ್ ಶೆಟ್ಟಿಗಿಂತ ಮೊದಲು ಅರವಿಂದ್ ಅಯ್ಯರ್ ಅವರು ನಾಯಕನ ಪಾತ್ರಕ್ಕೆ ಆಯ್ಕೆಯಾಗಿದ್ದರು ಎನ್ನಲಾಗಿದೆ. ‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಗೆಳೆಯನ ಪಾತ್ರದಲ್ಲಿ ನಟಿಸಿದ್ದ ಅರವಿಂದ್ ಅಯ್ಯರ್ ಗೆ ಸಿನಿಮಾದ ಕತೆಯನ್ನ ಮೊದಲು ಹೇಳಲಾಗಿತ್ತು. ಅರವಿಂದ್ ಸಹ ಸಿನಿಮಾ ಒಪ್ಪಿಕೊಂಡಿದ್ದರು ಎನ್ನಲಾಗಿದೆ. ಆದ್ರೆ ಬೇರೆ ಸಿನಿಮಾಗಳಲ್ಲಿ ತೊಡಗಿಸಿಕೊಂಡ ಅರವಿಂದ್ ಆದರೆ ಸಿನಿಮಾ ನಿರ್ಮಾಣ ಮಾಡಲು ಬಹಳ ಸಮಯ ಬೇಕಾಗುತ್ತದೆ ಎಂದು ಅರಿತ ನಂತರ ರಕ್ಷಿತ್ ಶೆಟ್ಟಿಗೆ ಆ ಆಫರ್ ಸಿಕ್ಕಿದೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.