ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ದೇವಸಮುದ್ರ ಎಂಬ ಗ್ರಾಮದಲ್ಲಿ ಕಾಡು ಹಂದಿ ಬೇಟೆಗಾಗಿ ಸಂಗ್ರಹಿಸಿಡಲಾಗಿದ್ದ 81 ನಾಡ ಬಾಂಬ್ ಗಳನ್ನು (Crude Bomb) ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಸುಮನ್ ಹಾಗೂ ಆಂಧ್ರಪ್ರದೇಶ (Andhra Pradesh) ಮೂಲದ ಗಂಗಣ್ಣ ಎಂಬ ಇಬ್ಬರು ಆರೋಪಿಗಳನ್ನು ಕೂಡ ಈ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸುಮನ್ ಎಂಬಾತನ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಾಂಬ್ಗಳು ಪತ್ತೆಯಾಗಿವೆ. ಬಾಂಬ್ಗಳು ಆಂಧ್ರ ಮೂಲದಿಂದ ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.
ಸ್ಫೋಟಕಗಳನ್ನು ಬಾಂಬ್ ನಿಷ್ಕ್ರಿಯ ದಳ ಸಿಬಾರ ಗ್ರಾಮದ ಬಳಿ ನಿಷ್ಕ್ರಿಯಗೊಳಿಸಲಾಗಿದೆ. ಹಲವು ವರ್ಷಗಳಿಂದ ಈ ನಾಡಬಾಂಬ್ ಸ್ಫೋಟ ನಡೆಯುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಪೊಲೀಸರು ಮಾಹಿತಿ ಸಂಗ್ರಹಿಸಿದ್ದರು.