ಮೇಲಾಧಿಕಾರಿಗಳ ಕಿರುಕುಳ : ಶುಶ್ರುಕಿ ಆತ್ಮಹತ್ಯೆಗೆ ಯತ್ನ
ಧಾರವಾಡ : ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಹಿರಿಯ ಶುಶ್ರೂಕಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಹೆಬ್ಬಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಯ ಕಮಲಾ ನಾಗೇಶ್ವರರಾವ್ ಆತ್ಮಹತ್ಯೆಗೆ ಯತ್ನಿಸಿದ ಶುಶ್ರುಕಿಯಾಗಿದ್ದಾರೆ.
ಕಮಲಾ ಅವರು ಆಸ್ಪತ್ರೆಯ ಹಿರಿಯ ಆರೋಗ್ಯ ಶುಶ್ರುಕಿ ಆಗಿದ್ದು, ಆಸ್ಪತ್ರೆ ಕೊಠಡಿಯಲ್ಲೇ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದಾರೆ.
ಈ ವೇಳೆ ಪಕ್ಕದಲ್ಲೇ ಇದ್ದ ಇತರೆ ಸಿಬ್ಬಂದಿಗಳು ಅವರನ್ನು ರಕ್ಷಣೆ ಮಾಡಿದ್ದಾರೆ.
ಇನ್ನು ಮೇಲಾಧಿಕಾರಿಗಳ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ತೀರ್ಮಾನಿಸಿದೆ ಎಂದು ಶುಶ್ರುಕಿ ಕಮಲಾ ಆರೋಪಿಸಿದ್ದಾರೆ.