ಪಿಎಂ ಕೇರ್ಸ್ ಫಂಡ್ ಭಾರತ ಸರ್ಕಾರದ ನಿಧಿಯಲ್ಲ | ಕಾಂಗ್ರೆಸ್ ಕಿಡಿ
ಬೆಂಗಳೂರು : ಪಿಎಂ ಕೇರ್ಸ್ ಫಂಡ್ ಭಾರತ ಸರ್ಕಾರದ ನಿಧಿಯಲ್ಲ. ಇದರಿಂದ ಸಂಗ್ರಹವಾದ ಹಣ ಭಾರತದ ಏಕೀಕೃತ ನಿಧಿಗೆ ಹೋಗಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ಗೆ ಮಾಹಿತಿ ನೀಡಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಪಿಎಂಕೇರ್ ಫಂಡ್ ಖಾಸಗಿ ಟ್ರಸ್ಟ್, ಸರ್ಕಾರಕ್ಕೂ ಅದಕ್ಕೂ ಸಂಬಂಧವಿಲ್ಲ.
ಮಾಹಿತಿ ಹಕ್ಕಿನಡಿಯಲ್ಲಿ ಮಾಹಿತಿ ನೀಡಲಾಗದು ಎಂದು ದೆಹಲಿ ಹೈಕೋರ್ಟಿಗೆ ಕೇಂದ್ರ ಸರ್ಕಾರ ತಿಳಿಸಿದೆ.
ಇದು ರಫೆಲ್ನಂತಯೇ ದೇಶದ ಅತಿ ದೊಡ್ಡ ಹಗರಣ ಎಂಬುದರಲ್ಲಿ ಅನುಮಾನವೇ ಇಲ್ಲ ಎಂದು ಹೇಳಿದೆ.
ಅಲ್ಲದೆ ಪಿಎಂ ಕೇರ್ಸ್ ಫಂಡನ್ನು ‘ಬಿಜೆಪಿ ಪಾರ್ಟಿ ಫಂಡ್’ ಆಗಿ ಬದಲಾಗಿರುವುದು ಸ್ಪಷ್ಟವಾಗಿದೆ ಎಂದು ಕಿಡಿಕಾರಿದೆ.