ನಾಡಿನೆಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ
ನಾಡಿನೆಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆ ಮಾಡಿದೆ.
ಆಶ್ವಯುಜ ಮಾಸದ ಕೃಷ್ಣಪಕ್ಷ ಚತುದರ್ಶಿ ದಿನವಾದ ಇಂದು ನರಕ ಚತುರ್ದಶಿ ಆಚರಿಸಲಾಗುತ್ತದೆ.
ಕತ್ತಲೆಯಿಂದ ಬೆಳಕಿನೆಡೆಗೆ ದಾರಿ ತೋರುವ ಹಬ್ಬದ ಆಚರಣೆಗೆ ಜನರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಸಂಭ್ರಮದಿಂದ ಹಬ್ಬದ ಖರೀದಿಯಲ್ಲಿ ತೊಡಗಿದ್ದಾರೆ.
ಅಂಗಡಿ ಮುಂಗಟ್ಟುಗಳು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡು ಗ್ರಾಹಕರನ್ನು ಕೈಬೀಸಿ ಕರೆಯುತ್ತಿವೆ.
ಆಕಾಶ ಬುಟ್ಟಿ, ಹಣತೆ ಖರೀದಿ ಜೋರಾಗಿ ನಡೆದಿದೆ.
ದೀಪಾವಳಿಯ ಪ್ರಮುಖ ಆಕರ್ಷಣೆಯಾದ ಪಟಾಕಿಗಳ ಖರೀದಿ ಜೊತೆಗೆ ಬಾಳೆಎಲೆ, ತೆಂಗಿಕಾಯಿ, ಬೂದುಗುಂಬಳ, ಪೂಜಾ ಸಾಮಗ್ರಿಗಳು ಅಲ್ಲದೇ ಸಿಹಿತಿಂಡಿ ಖರೀದಿಯೂ ಜೋರಾಗಿದೆ.
ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಆದ್ಯತೆ ನೀಡಲಾಗಿದ್ದು ಕೇವಲ ಹಸಿರು ಪಟಾಕಿ ಬಳಕೆಗೆ ಅನುಮತಿ ನೀಡಲಾಗಿದೆ.