ಚನ್ನಪಟ್ಟಣದಲ್ಲಿ ಅಪ್ಪು ಅಭಿಮಾನಿ ನೇಣಿಗೆ ಶರಣು Ramanagara saaksha tv
ರಾಮನಗರ : ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್ ಅವರ ಅಗಲಿಕೆ ಇನ್ನೂ ಅರಗಿಸಿಕೊಳ್ಳಲಾಗುತ್ತಿಲ್ಲ. ಸದಾ ಲವಲವಿಕೆಯಿಂದ ಇದ್ದ ಅಪ್ಪು ಈಗ ಇಲ್ಲ.. ಎಂಬ ಸತ್ಯವನ್ನ ಒಪ್ಪಿಕೊಳ್ಳಲು ಸಾಕಷ್ಟ ಕಷ್ಟವಾಗುತ್ತಿದೆ. ಈ ಮಧ್ಯೆ ಅಪ್ಪು ನಿಧನದಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಅಪ್ಪು ನಿಧನದ ನೋವನ್ನು ತಾಳಲಾರದೇ ನೇಣಿಗೆ ಶರಣನಾಗಿದ್ದಾರೆ. 26 ವರ್ಷದ ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಅಪ್ಪಟ ಅಪ್ಪು ಅಭಿಮಾನಿಯಾಗಿದ್ದ ವೆಂಕಟೇಶ್, ಕಳೆದ ಮೂರು ದಿನಗಳಿಂದ ಊಟ ಬಿಟ್ಟಿದ್ದರಂತೆ. ಅಲ್ಲದೇ ಅಪ್ಪು ಸಮಾಧಿ ಬಳಿಗೆ ಹೋಗಲೇಬೇಕು ಎಂದು ಹಠ ಹಿಡಿದಿದ್ದರಂತೆ.
ಆದ್ರೆ ಇವತ್ತು ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಸಂಬಂಧ ಚನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.