ಬಂದ್ ಗೆ ಕರೆ | ಹಿಂದೂಪರ ಸಂಘಟನೆ ಕಾರ್ಯಕರ್ತರ ಬಂಧನ
ಮಡಿಕೇರಿ : 144 ಸೆಕ್ಷನ್ ಅನ್ನು ಉಲ್ಲಂಘಿಸಿ ಪ್ರತಿಭಟನೆ ಬಂದ್ ಗೆ ಮುಂದಾದಾ ಹಿಂದೂಪರ ಸಂಘಟನೆ ಕಾರ್ಯಕರ್ತರನ್ನು ಸೋಮವಾರ ಪೇಟೆ ಪೊಲೀಸರು ಬಂಧಿಸಿದ್ದಾರೆ.
ಪೆÇಲೀಸ್ ಠಾಣೆ ಮುಂಭಾಗ ಪ್ರತಿಭಟಿಸುತ್ತಿದ್ದ ಮುಸ್ಲಿಂ ಮಹಿಳೆಯರು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಶನಿವಾರ ಸಂತೆ ಬಂದ್ ಗೆ ಕರೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಪೊಲೀಸರು ಶನಿವಾರ ಸಂತೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದರು. ಅಲ್ಲದೆ ನಗರದಲ್ಲಿ ಯಾವುದೇ ಪ್ರತಿಭಟನೆ, ಬಂದ್ ಗೆ ಅವಕಾಶವಿಲ್ಲ ಎಂದು ಸಾರುತ್ತಾ, ಶನಿವಾರ ಸಂತೆಯಲ್ಲಿ ಜನರು ಎಂದಿನಂತೆ ವ್ಯಾಪಾರ ನಡೆಸಬಹುದು ಎಂದು ಪ್ರಚಾರ ಮಾಡುತ್ತಿದ್ದರು.
ಆದ್ರೆ ಈ ವೇಳೆ ಕೆಲ ಹಿಂದೂಪರ ಸಂಘಟನೆಗಳ ಹತ್ತಾರು ಮುಖಂಡರು ಮತ್ತು ಕಾರ್ಯಕರ್ತರು 144 ಸೆಕ್ಷನ್ ಉಲ್ಲಂಘಿಸಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲು ಮುಂದಾಗಿದ್ದರು. ಹೀಗಾಗಿ ಸೋಮವಾರಪೇಟೆ ಡಿವೈಎಸ್ ಪಿ ಶೈಲೇಂದ್ರ ಕುಮಾರ್ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಈ ವೇಳೆ ಪೊಲೀಸರ ಮತ್ತು ಹಿಂದುಪರ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು.