ಗೋಡ್ಸೆ ಪ್ರತಿಮೆ ಧ್ವಂಸಗೊಳಿಸಿದ ಕಾಂಗ್ರೆಸ್ ಕಾರ್ಯಕರ್ತರು Congress saaksha tv
ಗಾಂಧಿನಗರ : ಹಿಂದು ಸೇನೆ ಸ್ಥಾಪಿಸಿದ್ದ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯ ಪ್ರತಿಮೆಯನ್ನು ಗುಜರಾತ್ ನ ಕಾಂಗ್ರೆಸ್ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ.
ಕಳೆದ ಆಗಸ್ಟ್ ತಿಂಗಳಿನಲ್ಲಿ ಜಾಮ್ ನಗರದಲ್ಲಿ ನಾಥೂರಾಂ ಗೋಡ್ಸೆ ಪ್ರತಿಮೆಯನ್ನು ಸ್ಥಾಪಿಸಲು ಹಿಂದು ಸೇನೆ ಅನುಮತಿ ಕೋರಿತ್ತು.
ಆದ್ರೆ ಇದಕ್ಕೆ ಅಲ್ಲಿನ ಸ್ಥಳೀಯ ಅಧಿಕಾರಿಗಳು ಜಾಗ ನೀಡಿರಲಿಲ್ಲ. ಹೀಗಾಗಿ ಹಿಂದು ಸೇನೆಯೂ ಹನುಮಾನ್ ಆಶ್ರಮದಲ್ಲಿ ಪ್ರತಿಮೆಯನ್ನು ನಿರ್ಮಿಸಿತ್ತು.
ಆ ಪ್ರತಿಮೆಯನ್ನು ಇಂದು ಬೆಳಿಗ್ಗೆ ಜಾಮ್ ನಗರದ ಕಾಂಗ್ರೆಸ್ ಅಧ್ಯಕ್ಷ ದಿಗುಭಾ ಜಡೇಜಾ ಹಾಗೂ ಅವರ ಸಹಚರರು ಸೇರಿ ಧ್ವಂಸಗೊಳಿಸಿದ್ದಾರೆ.
ಅಲ್ಲದೆ ಧ್ವಂಸಗೊಳಿಸುತ್ತಿರುವ ವೇಳೆಯಲ್ಲಿ ಕಾರ್ಯಕರ್ತರೆಲ್ಲರು ಅದರ ಸುತ್ತಲು ಕೇಸರಿ ಬಣ್ಣದ ಬಟ್ಟೆಯನ್ನು ಸುತ್ತಿದ್ದಾರೆ.