ಕೃಷಿ ಕಾನೂನು ವಾಪಸ್ : ಬಿ.ಸಿ.ಪಾಟೀಲ್ ಹೇಳಿದ್ದೇನು..? BC Patil saaksha tv
ಹೊಸ ಕಾನೂನುಗಳ ಪ್ರಯೋಜನಗಳ ಬಗ್ಗೆ ಕೆಲವು ವರ್ಗದವರಿಗೆ ಅರ್ಥಮಾಡಿಸಲು ಸಾಧ್ಯವಾಗದೇ ಇರುವುದರಿಂದ ಕೇಂದ್ರ ಸರ್ಕಾರ ಕೃಷಿ ಕಾಯಿದೆಗಳನ್ನ ಹಿಂದಕ್ಕೆ ತೆಗೆದುಕೊಳ್ಳಲು ನಿರ್ಧರಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಹಿರೇಕೆರೂರು ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ, ರೈತರ ಬೆಳೆಗಳಿಗೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ, ಇಂದು ಹಳ್ಳೂರ್, ಚಟ್ನಹಳ್ಳಿ ಹಾಗೂ ಪುರದಕೆರೆ ಗ್ರಾಮಗಳಿಗೆ ಸಚಿವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಕಾಲಿಕ ಮಳೆಯಿಂದ ಹಾನಿಯಾದ ಬೆಳೆಗಳ ಸಮೀಕ್ಷೆ ನಡೆಸಿ, ತಕ್ಷಣ ವರದಿಯನ್ನು ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಕೃಷಿ ಕಾನೂನುಗಳು ವಾಪಸ್ ಪಡೆದ ಬಗ್ಗೆ ಪ್ರತಿಕ್ರಿಯೆ ನೀಡಿ, ರೈತರಿಗೆ ಸಮಂಜಸವಾದ ದರದಲ್ಲಿ ಬೀಜಗಳನ್ನು ಒದಗಿಸಲು ಮತ್ತು ಸೂಕ್ಷ್ಮ ನೀರಾವರಿ, 22 ಕೋಟಿ ಮಣ್ಣಿನ ಆರೋಗ್ಯ ಕಾರ್ಡ್ಗಳಂತಹ ಸೌಲಭ್ಯಗಳನ್ನು ಒದಗಿಸಲು ನಾವು ಕೆಲಸ ಮಾಡಿದ್ದೇವೆ. ಇಂತಹ ಅಂಶಗಳು ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಕಾರಣವಾಗಿವೆ. ಆದಾಗ್ಯೂ, ಹೊಸ ಕಾನೂನುಗಳ ಪ್ರಯೋಜನಗಳ ಬಗ್ಗೆ ಕೆಲವು ವರ್ಗದವರಿಗೆ ಅರ್ಥಮಾಡಿಸಲು ಸಾಧ್ಯವಾಗದೇ ಇರುವುದರಿಂದ ಕೇಂದ್ರ ಸರ್ಕಾರ ಕೃಷಿ ಕಾಯಿದೆಗಳನ್ನ ಹಿಂದಕ್ಕೆ ತೆಗೆದುಕೊಳ್ಳಲು ನಿರ್ಧರಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎಂದಿದ್ದಾರೆ.