ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಂಸತ್‌, ವಿಧಾನಸಭೆ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯಕ್ಕೆ ಸಂವಿಧಾನದ ತಿದ್ದುಪಡಿ ಬೇಕು : ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ

Mahesh M Dhandu by Mahesh M Dhandu
November 27, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಸಂಸತ್‌, ವಿಧಾನಸಭೆ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯಕ್ಕೆ ಸಂವಿಧಾನದ ತಿದ್ದುಪಡಿ ಬೇಕು : ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ Constitution Day saaksha tv

ಬೆಂಗಳೂರು : ಸಂಸತ್, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳ ಪ್ರತಿನಿಧಿಸುವಂತಹ ಅವಕಾಶ ನೀಡಲು ಸಂವಿಧಾನದಲ್ಲಿ ತಿದ್ದುಪಡಿ ತರಬೇಕು’ ಎಂದು ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಪ್ರತಿಪಾದಿಸಿದ್ದಾರೆ.

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ವತಿಯಿಂದ ಶಾಸಕರ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ದಿನಾಚರಣೆ ಹಾಗೂ ಜಾಗೃತಿ ವೇದಿಕೆಯ ಉದ್ಘಾಟನೆಯನ್ನು ನೆರವೇರಿಸಿ ಸುಪ್ರೀಂ ಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಶುಕ್ರವಾರ ಅವರು ಮಾತನಾಡಿದರು.

`ಸೌಲಭ್ಯಗಳು ಮತ್ತು ಸಮಾಜದ ಸಂಪತ್ತುಗಳು ಸಮಾನವಾಗಿ ದಕ್ಕುವಂತೆ ನೀತಿಗಳನ್ನು ರೂಪಿಸಿ ಕೇಂದ್ರ ಮತ್ತು ರಾಜ್ಯ ಸರಕಾರಿಗಳು ಅನುಷ್ಠಾನಕ್ಕೆ ತಂದು ಪ್ರಾಮಾಣಿಕವಾಗಿ ಅರ್ಹರಿಗೆ ತಲುಪಿಸುವಂತೆ ಮಾಡಿದಾಗ ಮಾತ್ರ ದೇಶದ ಪ್ರಗತಿ ಮತ್ತು ಅಭಿವೃದ್ಧಿ ಸಾಧ್ಯ ಎಂದ ಅವರು, ರಾಜಕೀಯ ಧುರೀಣರು, ಎಲ್ಲಾ ರಾಷ್ಟ್ರ, ರಾಜಕೀಯ ಪಕ್ಷಗಳು, ಪ್ರಾದೇಶಿಕ ಪಕ್ಷಗಳು ಅತಿ ಹಿಂದುಳಿದ ವರ್ಗದವರಿಗೆ ಬೆಂಬಲ ನೀಡಿ, ಅವರಿಗೆ ನ್ಯಾಯ ದೊರಕಿಸಿಕೊಡಬೇಕು. ಸುಪ್ರೀಂ ಕೋರ್ಟ್‍ನಲ್ಲಿ ಈಗಾಗಲೇ 2009ರಲ್ಲಿ ಪ್ರಸ್ತಾಪಿಸಿದಂತೆ ಹೆಣ್ಣು ಮಕ್ಕಳು ಅಬಲರು. ಅವರನ್ನು ಸಬಲೀಕರಣಗೊಳಿಸುವ ಅವಶ್ಯವಿದೆ. ಯಾವುದೇ ಮತ ಅಥವಾ ಜಾತಿಯ ಜನರಾಗಲಿ, ಹಿಂದುಳಿದ ವರ್ಗದವರಾಗಲಿ, ಅವರಿಗೆ ಸಲ್ಲಬೇಕಾದ ಹಕ್ಕುಗಳನ್ನು ಕಲ್ಪಿಸುವುದು ತುಬಾ ಅವಶ್ಯವಿದೆ ಎಂದರು.

ಸಂಸತ್, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳು ಪ್ರತಿನಿಧಿಸುವಂತಹ ಅವಕಾಶ ನೀಡಲು ಸಂವಿಧಾನದಲ್ಲಿ ತಿದ್ದುಪಡಿ ತರಬೇಕು. ಸುಪ್ರೀಂ ಕೋರ್ಟ್ ಈಗಾಗಲೇ ಬೊಮ್ಮಾಯಿ ಪ್ರಕರಣದಲ್ಲಿ 94ರಲ್ಲಿ ಹೇಳಿದಂತೆ ಹಾಗೂ 96ರಲ್ಲಿ ಮೊದಲಿಯಾರ್ ಐಡಲ್ ಕೇಸ್‍ನಲ್ಲಿ ಸೆಕ್ಷನ್ 14ರ ಅನುಚ್ಚೇದ -1956ರ ಪ್ರಕಾರ ನಾಗರಿಕ ಹಕ್ಕು, ಶಿಕ್ಷಣ ಹಕ್ಕು, ಸಾಂಸ್ಕøತಿಕ ಹಕ್ಕು, ಆರ್ಥಿಕ ಹಕ್ಕು ಹೆಣ್ಣು ಮಕ್ಕಳಿಗೆ ಸಲ್ಲಬೇಕಾಗಿದೆ. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದಿದೆ. ಇಂತಹ ತೀರ್ಪುಗಳು ಕಾರ್ಯಾಂಗ ಮತ್ತು ಶಾಸಕಾಂಗದಲ್ಲಿ ಅನುಷ್ಠಾನಗೊಳ್ಳಬೇಕು. ಇಲ್ಲದಿದ್ದರೆ ದೇಶದ ಪ್ರಗತಿ ಕುಂಠಿತಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದರು.

Constitution Day saaksha tv

ರಾಜ್ಯದ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಗೌರವ ಸಲಹೆಗಾರರಾದ ಸಿ.ಎಸ್. ದ್ವಾರಕಾನಾಥ್ ಮಾತನಾಡಿ, `ಧ್ವನಿಯಿಲ್ಲದ ಸಮುದಾಯಗಳಿಗೆ ಧ್ವನಿ ನೀಡಬೇಕಾಗಿದೆ. ಯಾಕೆಂದರೆ ಈ ಸಮುದಾಯಗಳಿಗೆ ಯಾವುದೇ ಮಠ-ಮಾನ್ಯಗಳಿಲ್ಲ. ಹೀಗಾಗಿ ಅತಿ ಹಿಂದುಳಿದ ವರ್ಗಗಳ ಪರವಾಗಿ ನಿಲ್ಲಬೇಕಾಗಿದೆ’ ಎಂದರು.

ಸಂವಿಧಾನ ದಿನ ಎಂದರೆ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡಂತಹ ಪವಿತ್ರವಾದ ದಿನ. ಇಂತಹ ಪವಿತ್ರವಾದ ದಿನದಂದು ಅತಿ ಹಿಂದುಳಿದ ವರ್ಗವಗಳ ಜಾಗೃತಿ ವೇದಿಕೆಯನ್ನು ಉದ್ಘಾಟನೆ ಮಾಡಿರುವುದು ಸಂತೋಷದ ಸಂಗತಿ. ದೊಡ್ಡ ಪ್ರಮಾಣದಲ್ಲಿ ಮಾಡುವ ಆಲೋಚನೆಯಿತ್ತು. ಆದರೆ ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತಿಯಿರುವುದರಿಂದ ಸರಳವಾಗಿ ಕಾರ್ಯಕ್ರಮ ಮಾಡಲಾಗಿದೆ. ಹಿಂದುಳಿದ ಹಾಗೂ ಅತಿ ಹಿಂದುಳಿದ ವರ್ಗಗಳವರು ಶೇ.56ರಷ್ಟು ಜನಸಂಖ್ಯೆಯಿದೆ. ಇಷ್ಟು ದೊಡ್ಡ ಸಂಖ್ಯೆಯುಳ್ಳ ಸಮುದಾಯಕ್ಕೆ ಯಾವುದೇ ಪ್ರಾತಿನಿಧ್ಯ ಇಲ್ಲದೆ ಕೊರಗುವಂತಾಗಿದೆ. ರಾಜಕೀಯ, ಅಧಿಕಾರದಲ್ಲಿ ಪ್ರಾತಿನಿಧ್ಯವಿಲ್ಲ. ಹಾಗಾಗಿ ಪ್ರಾತಿನಿಧ್ಯ ರಹಿತವಾದ ಸಮುದಾಯಗಳು ಇಲ್ಲಿವೆ.

ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಅಧ್ಯಕ್ಷ ಎಂ ಸಿ ವೇಣುಗೋಪಾಲ್‌ ಮಾತನಾಡಿ, ಪ್ರವರ್ಗ-1ರಲ್ಲಿ 95 ಜಾತಿಗಳಿವೆ. ಪ್ರವರ್ಗ-2ಎನಲ್ಲಿ 102 ಜಾತಿಗಳಿವೆ. ಈ ಎರಡೂ ಸೇರಿ 197 ಜಾತಿಗಳಿವೆ. ಅನೇಕರಿಗೆ ಆಶ್ಚರ್ಯವಾಗಬಹುದು. ಅತಿ ಹಿಂದುಳಿದ ವರ್ಗಗಳ ವೇದಿಕೆ ಎಂದು ಯಾಕೆ ಮಾಡಲಾಗಿದೆ ಯುಪಿ ಬಿಹಾರ್‍ನಲ್ಲಿ ಅಲ್ಲಿರುವ ಮೇಜರ್ ಸಮುದಾಯಗಳು ಹಿಂದುಳಿದ ವರ್ಗಗಳೇ ಆಗಿವೆ. ಇಲ್ಲೂ ಕೂಡ ಮೇಜರ್ ಸಮುದಾಯಗಳು ಹಿಂದುಳಿದ ವರ್ಗಗಳೇ ಆಗಿವೆ. ಈ ಸಮುದಾಯಕ್ಕೆ ಒಂದು ಗುರುತಿನ ಅಸ್ಮಿತೆ ಬೇಕಲ್ಲವೇ? ನಮ್ಮ ಪಾಲನ್ನು ನಾವು ಪಡೆದುಕೊಳ್ಳುತ್ತಿದ್ದೇವಾ? ಕಳೆದ 40 ವರ್ಷಗಳಿಂದ ನಮ್ಮ ಪಾಲು ಎಷ್ಟರ ಮಟ್ಟಿಗೆ ಸಿಕ್ಕಿದೆ. 197 ಸಮುದಾಯಗಳಲ್ಲಿ ಕೇವಲ 23 ಸಮುದಾಯಗಳು ಮಾತ್ರವೇ ಉದ್ಯೋಗ ಮತ್ತು ಶಿಕ್ಷಣದಲ್ಲಿ ಪ್ರಾತಿನಿಧ್ಯ ಪಡೆದಿವೆ. ಪ್ರವರ್ಗ-2ಎನ 102 ಸಮುದಾಯಗಳಲ್ಲಿ ಸುಮಾರು 27 ಸಮುದಾಯಗಳು ಮಾತ್ರ ಪ್ರಾತಿನಿಧ್ಯ ಪಡೆದಿವೆ. ಸುಮಾರು 70 ಸಮುದಾಯಗಳು ಇದುವರೆಗೆ ಒಂದು ಬಾರಿಯೂ ರಾಜಕೀಯ ಪ್ರಾತಿನಿಧ್ಯ ಪಡೆದಿಲ್ಲ. ಯಾವುದೇ ಅಧಿಕಾರ, ಶಿಕ್ಷಣದ ಸೌಲಭ್ಯಗಳನ್ನು ಪಡೆಯಲಾಗಿಲ್ಲ. ಧ್ವನಿಯಿಲ್ಲದ ಸಮುದಾಯಗಳಿಗೆ ಧ್ವನಿ ನೀಡಬೇಕಾಗಿದೆ ಎಂದರು.

ಯಾಕೆಂದರೆ ಈ ಸಮುದಾಯಗಳಿಗೆ ಯಾವುದೇ ಮಠ-ಮಾನ್ಯಗಳಿಲ್ಲ. ಮೆಡಿಕಲ್, ಎಂಜಿನಿಯರಿಂಗ್ ಕಾಲೇಜುಗಳಿಲ್ಲ. ಹೇಳುವವರು ಕೇಳುವವರಿಲ್ಲ. ಇತ್ತೀಚೆಗಷ್ಟೇ ಧರ್ಮಗುರುಗಳು ಕಣ್ತೆರೆಯುತ್ತಿವೆ. ಆದರೆ ಸರಕಾರಗಳು ದೊಡ್ಡ ಸಮುದಾಯಗಳಿಗೆ 500 ಕೋಟಿಯಷ್ಟು ಅನುದಾನ ನೀಡಿದರೆ, ನಮ್ಮ ಧರ್ಮಗುರುಗಳಿಗೆ ಪ್ಲೇಟ್ ಮೀಲ್ಸ್ ಗೂ ಹಣ ಕೊಡುತ್ತಿಲ್ಲ. ಇದು ನೋವಿನ ಸಂಗತಿ. ನಮ್ಮ ಸಮುದಾಯಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಮ್ಮ ಧ್ವನಿ ಇಡೀ ರಾಜ್ಯಕ್ಕೆ, ರಾಷ್ಟ್ರಕ್ಕೆ ಕೇಳಿಸಬೇಕಾಗಿದೆ. ಅನ್ಯ ರಾಜ್ಯಗಳಂತೆ ಅತಿ ಹಿಂದುಳಿದ ವರ್ಗಗಳ ಚಳವಳಿಗೆ ಎಲ್ಲಾ ಪ್ರಬಲ ಜಾತಿಯ ಸಮುದಾಯಗಳು ನಮ್ಮನ್ನು ಬೆಂಬಲಿಸಬೇಕು ಎಂದು ನಾವು ಕಳಕಳಿಯಿಂದ ಮನವಿ ಮಾಡಿಕೊಳ್ಳುತ್ತೇವೆ. ನಿಮ್ಮ ಜತೆಯಲ್ಲಿರುವ ಅಣ್ಣ ತಮ್ಮಂದಿರು ನಾವು. ಬದುಕಲು ನಮಗೂ ಅವಕಾಶ ಕೊಡಿ. ಅಂಬೇಡ್ಕರ್ ಅವರು 72 ವರ್ಷಗಳ ಹಿಂದೆ ಕಡೇ ಭಾಷಣದಲ್ಲಿ ಮೂರು ಅಂಶಗಳನ್ನು ಹೇಳುತ್ತಾರೆ. ಸಂವಿಧಾನವನ್ನು ಕೇವಲ ರಾಜಕೀಯವಾಗಿ ಮಾತ್ರ ತೆಗೆದುಕೊಂಡು ಹೋದರೆ ಅದರಿಂದ ಪ್ರಯೋಜನವಿಲ್ಲ. ಸಾಮಾಜಿಕ, ಆರ್ಥಿಕವಾಗಿಯೂ ಕೂಡ ತೆಗೆದುಕೊಂಡು ಹೋಗಬೇಕು. ಇದು ವ್ಯಕ್ತಿ ಪ್ರಧಾನವಲ್ಲ, ಸಂಸ್ಥೆ ಪ್ರಧಾನವಾಗಬೇಕು. ಸಂವಿಧಾನಲ್ಲಿರುವ ಸಹೋದರತ್ವ, ಸಹಬಾಳ್ವೆ ಎಲ್ಲವನ್ನೂ ಸಮಾನವಾಗಿಹಂಚಿಕೆಯಾಗಬೇಕು. ಪಾಲನ್ನು ಹಂಚಿಕೊಳ್ಳುವ ಸಂದರ್ಭ ಬರಬೇಕು ಎಂದು ಹೇಳಿದರು

ಸಂವಿಧಾನವನ್ನು ಅರ್ಪಿಸಿಕೊಂಡು 72 ವರ್ಷವಾದರೂ ನಮಗೆ ಈವರೆಗೆ ಯಾವುದೇ ಸವಲತ್ತು ಸಿಕ್ಕಿಲ್ಲ. ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ. ಇಂತಹ ಸಂದರ್ಭದಲ್ಲಿ ಧ್ವನಿ ಎತ್ತಲೇಬೇಕು. ಹೋರಾಟವನ್ನೂ ರೂಪಿಸಬೇಕಾದ ಅನಿವಾರ್ಯತೆ ಇದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಅಧ್ಯಕ್ಷ ಎಂ.ಸಿ. ವೇಣುಗೋಪಾಲ್, ಗೌರವ ಸಲಹೆಗಾರರಾದ ಸಿ.ಎಸ್. ದ್ವಾರಕಾನಾಥ್, ಪಿ.ಎನ್. ಶ್ರೀನಿವಾಸಾಚಾರಿ, ಪ್ರಧಾನಕಾರ್ಯದರ್ಶಿ ಎಂ. ನಾಗರಾಜು ಮತ್ತು ಖಚಾಂಚಿ ಮಂಜುನಾಥ್ ಮತ್ತು ಅತಿಹಿಂದುಳಿದ ವರ್ಗಕ್ಕೆ ಸೇರಿದ ಮಠಾಧೀಶರುಗಳು ಮತ್ತಿತರರು ಉಪಸ್ಥಿತರಿದ್ದರು.

Tags: #Saaksha TVbangaloreConstitution DayV. Gopalagowda
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram