ಕೆಎಸ್ ಆರ್ ಟಿಸಿ ಬಸ್ – ಕಾರು ಮುಖಾಮುಖಿ ಡಿಕ್ಕಿ | ನಾಲ್ಕು ಮಂದಿ ಸಾವು
ದಾವಣಗೆರೆ : ಸರ್ಕಾರಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ದಾವಣಗೆರೆಯ ಸವಳಂಗ ಬಳಿ ನಡೆದಿದೆ.
30 ವರ್ಷದ ಸುನೀಲ್, 40 ವರ್ಷದ ದ್ರಾಕ್ಷಾಯಿಣಮ್ಮ, 45 ವರ್ಷದ ಸುಮಾ, 65 ವರ್ಷದ ಶಾರದಮ್ಮ ಮೃತ ದುರ್ದೈವಿಗಳಾಗಿದ್ದಾರೆ.
ಇವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಏಡೇಹಳ್ಳಿ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ.
ಇನ್ನು ಘಟನೆಯಲ್ಲಿ ಕಾರನಲ್ಲಿದ್ದ ಆಶಾ ಎಂಬುವವರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆ ದಾಖಲಾಗಿದ್ದಾರೆ.
ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.