ರಾಜ್ಯ ಯುವ ಜನೋತ್ಸವಕ್ಕೆ ರಾಜ್ಯಪಾಲರಿಂದ ಚಾಲನೆ
ಮಂಡ್ಯ: ಆದಿಚುಂಚನಗಿರಿಯಲ್ಲಿ ನಡೆಯುತ್ತಿರುವ ರಾಜ್ಯ ಯುವ ಜನೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಚಾಲನೆ ನೀಡಿದ್ದಾರೆ.
ಇದಕ್ಕು ಮುನ್ನ ಆದಿಚುಂಚನಗಿರಿಗೆ ಬಂದ ರಾಜ್ಯಪಾಲರಿಗೆ ರಾಜ್ಯಪಾಲರಿಗೆ ಶ್ರೀಮಠದಿಂದ ವಿವಿಧ ಜಾನಪದ ಕಲಾತಂಡಗಳೊಂದಿಗೆ ಪೂರ್ಣಕುಂಭ ಮೂಲಕ ಸ್ವಾಗತ ಕೋರಲಾಗಿದೆ. ಬಳಿಕ ರಾಜ್ಯಪಾಲರು ಆದಿಚುಂಚನಗಿರಿ ಶ್ರೀಗಳ ಆಶಿರ್ವಾದ ಪಡೆದುಕೊಂಡರು.
ಇನ್ನು ಈ ಕಾರ್ಯಕ್ರಮದಲ್ಲಿ ಸಚಿವರಾದ ನಾರಾಯಣ ಗೌಡ, ಸುನಿಲ್ ಕುಮಾರ, ಜಿಲ್ಲಾಡಳಿತದ ಅಧಿಕಾರಿಗಳು ಭಾಗಿಯಾಗಿದ್ದರು.