ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ.. ಆ ನಂತರ ನಾವೇ ಸನ್ಮಾನ ಮಾಡುತ್ತೇವೆ : ಡಾ. ಶಂಕರ್ ಗುಹಾ ದ್ವಾರಕನಾಥ್ ಬೆಳ್ಳೂರು

admin by admin
January 5, 2022
in Newsbeat, State, ರಾಜ್ಯ
Shree Guru Raghavendra Credit Co-operative Bank saaksha tv
Share on FacebookShare on TwitterShare on WhatsappShare on Telegram

ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ.. ಆ ನಂತರ ನಾವೇ ಸನ್ಮಾನ ಮಾಡುತ್ತೇವೆ : ಡಾ. ಶಂಕರ್ ಗುಹಾ ದ್ವಾರಕನಾಥ್ ಬೆಳ್ಳೂರು Shree Guru Raghavendra Credit Co-operative Bank saaksha tv

ಬೆಂಗಳೂರು : ಶ್ರೀ ಗುರು ರಾಘವೇಂದ್ರ ಕ್ರೆಡಿಟ್‌ ಕೋ-ಆಪರೇಟಿವ್‌ ಬ್ಯಾಂಕ್‌ ವಂಚನೆ ಪ್ರಕರಣದ ಸಂಬಂಧ ತಪ್ಪಿತಸ್ಥರಿಗೆ ಶಿಕ್ಷೆಯಾಗಲೆಬೇಕು. ಈ ಪ್ರಕರಣದಲ್ಲಿ ವಂಚನೆಗೆ ಒಳಗಾದವರಿಗೆ ನ್ಯಾಯ ದೊರಕಿದ ನಂತರ ನಾವೇ ಸಂಸದರಿಗೆ ಸನ್ಮಾನ ಮಾಡುತ್ತೇವೆ ಎಂದು ಶ್ರೀ ಗುರು ರಾಘವೇಂದ್ರ ಕ್ರೆಡಿಟ್‌ ಕೋ-ಆಪರೇಟಿವ್‌ ಬ್ಯಾಂಕ್‌ ಷೇರುದಾರರು ಮತ್ತು ಠೇವಣಿದಾರರ ಹಿತರಕ್ಷಣಾ ವೇದಿಕೆಯ ಮಹಾಪೋಷಕರಾದ ಡಾ. ಶಂಕರ್‌ ಗುಹಾ ದ್ವಾರಕನಾಥ್‌ ಬೆಳ್ಳೂರು ಹೇಳಿದ್ದಾರೆ.

Related posts

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

June 25, 2026
FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

June 24, 2026

ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಡಾ.ಶಂಕರ್‌ ಗುಹಾ ದ್ವಾರಕನಾಥ್‌ ಬೆಳ್ಳೂರು ಮಾತನಾಡಿ, ಸಂಸದ ತೇಜಸ್ವಿ ಸೂರ್ಯ ಮತ್ತು ಸ್ಥಳೀಯ ಶಾಸಕ ರವಿ ಸುಬ್ರಮಣ್ಯ ಅವ್ರ ನಡೆಯನ್ನು ಖಂಡಿಸಿದರು.

ಇದೇ ಜನವರಿ 10 ನೇ ತಾರೀಖಿಗೆ ಶ್ರೀ ಗುರು ರಾಘವೇಂದ್ರ ಕ್ರೆಡಿಟ್‌ ಕೋ-ಆಪರೇಟಿವ್‌ ಬ್ಯಾಂಕ್‌ ವಂಚನೆ ಪ್ರಕರಣ ಬೆಳಕಿಗೆ ಬಂದು ಎರಡು ವರ್ಷಗಳಾಗಲಿದೆ. ಈಗಾಗಲೇ 100ಕ್ಕೂ ಹೆಚ್ಚು ಠೇವಣಿದಾರರು ಸಾವನ್ನಪ್ಪಿದ್ದಾರೆ. ಸಾವಿರಾರು ಜನ ಠೇವಣಿದಾರರು ನಿತ್ಯ ಜೀವನ ನಡೆಸುವುದಕ್ಕೂ ಆಗದೆ ಪರದಾಡುತ್ತಿದ್ದಾರೆ. 46 ಸಾವಿರ ನೇರ ಠೇವಣಿದಾರರು, 120 ಸಹಕಾರಿ ಸಂಸ್ಥೆಗಳಲ್ಲಿ ಠೇವಣಿಯಿಟ್ಟಿದ್ದ ಸುಮಾರು 60ರಿಂದ 80 ಸಾವಿರ ಜನ ಗುರು ರಾಘವೇಂದ್ರ ಬ್ಯಾಂಕ್‌ ವಂಚನೆಯಿಂದ ಸಂಕಷ್ಟಕ್ಕೀಡಾಗಿದ್ದಾರೆ. ಇವರ ನೆರವಿಗೆ ಧಾವಿಸಿ ಠೇವಣಿದಾರರ ಹಿತಕಾಯಬೇಕಿದ್ದ ಸ್ಥಳೀಯ ಸಂಸದ ತೇಜಸ್ವಿ ಸೂರ್ಯ ಮತ್ತು ಸ್ಥಳೀಯ ಶಾಸಕ ರವಿ ಸುಬ್ರಮಣ್ಯ ಮಾತ್ರ DICGC ವಿಮೆ ಹಣವನ್ನು ತಾವೇ ಕೊಡಿಸಿದ್ದು ಎಂದು ಹೇಳಿಕೊಂಡು ಸನ್ಮಾನ ಮಾಡಿಸಿಕೊಳ್ಳುತ್ತಿದ್ದಾರೆ.

Shree Guru Raghavendra Credit Co-operative Bank  saaksha tv

DICGC ವಿಮೆ ಹಣದ ಬಗ್ಗೆ ಮಾತನಾಡುವ ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ರವಿ ಸುಬ್ರಮಣ್ಯ ಅವರು ಠೇವಣಿದಾರರ ಪೂರ್ಣ ಹಣ ವಾಪಸ್‌ ಮಾಡಿಸುವುದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ.? ವಂಚನೆ ಪ್ರಕರಣದ ತನಿಖೆಯ ಬಗ್ಗೆ ಏಕೆ ಚಕಾರವೆತ್ತುತ್ತಿಲ್ಲ.? ಪ್ರಕರಣವನ್ನು ಸಿಬಿಐ ಗೆ ವಹಿಸುವುದರ ಬಗ್ಗೆ ಎಷ್ಟೇ ಒತ್ತಡ ಬಂದರೂ ಸಹ ಆ ಬಗ್ಗೆ ಯಾಕೆ ಮಾತನಾಡುತ್ತಿಲ್ಲ.? ವಸಿಷ್ಠ ಕೋ-ಆಪರೇಟಿವ್‌ ಸೊಸೈಟಿ ವಂಚನೆ ಪ್ರಕರಣದ ಬಗ್ಗೆ ಸಹ ಇದೇ ನಿರ್ಲಕ್ಷ್ಯ ವಹಿಸಿರುವುದು ಏಕೆ ಎಂದು ಡಾ. ಶಂಕರ್‌ ಗುಹಾ ದ್ವಾರಕನಾಥ್‌ ಬೆಳ್ಳೂರು ಗುಡುಗಿದರು.

ಅಲ್ಲದೆ ಈ ಎಲ್ಲಾ ಪ್ರಶ್ನೆಗಳಿಗೆ ಮೊದಲು ಉತ್ತರ ಕೊಟ್ಟು ಆ ನಂತರ ಬೇಕಾದರೆ ಸನ್ಮಾನ ಮಾಡಿಸಿಕೊಳ್ಳಲಿ. ಗುರು ರಾಘವೇಂದ್ರ ಬ್ಯಾಂಕ್‌, ಗುರುಸಾರ್ವಭೌಮ ಸೊಸೈಟಿ, ವಸಿಷ್ಠ ಕೋ-ಆಪರೇಟಿವ್‌ ಸೊಸೈಟಿ, ನಾಗರತ್ನ ಕೋ-ಆಪರೇಟಿವ್‌ ಸೊಸೈಟಿ, ಮಹಾಗಣಪತಿ ಕೋ-ಆಪರೇಟಿವ್‌ ಸೊಸೈಟಿ, ಬೆಳ್ಳಿ ಬೆಳಕು ಕೋ-ಆಪರೇಟಿವ್‌ ಸೊಸೈಟಿ ಹೀಗೆ ಒಂದಲ್ಲ ಎರಡಲ್ಲ ಹಲವು ವಂಚನೆ ಪ್ರಕರಣಗಳು ನಡೆದರೂ ಸ್ಥಳೀಯ ಸಂಸದರು ಮತ್ತು ಶಾಸಕರು ಮಾತ್ರ ಅವ್ಯವಹಾರ ನಡೆಯದಂತೆ ತಡೆಯುವುದಾಗಲಿ, ಹಣ ಕಳೆದುಕೊಂಡ ಠೇವಣಿದಾರರ ಪರ ನಿಲ್ಲುವುದಾಗಲಿ ಮಾಡದೆ ಕೇವಲ ತಮ್ಮನ್ನು ತಾವು ಹೊಗಳಿಕೊಂಡು ಸನ್ಮಾನ ಸಮಾರಂಭಗಳಲ್ಲಿ ತೊಡಗಿರುವುದನ್ನು ನೋಡಿದರೆ ಅವರ ಜನಪರ ಕಾಳಜಿ ಎಂತಹುದು ಎಂದು ತಿಳಿಯುತ್ತದೆ ಎಂದು ಕಿಡಿಕಾರಿದರು.

ಇನ್ನು ಗುರು ಸಾರ್ವಭೌಮ ಸೊಸೈಟಿಯಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದೆ. ಆ ಸೊಸೈಟಿಯ ಠೇವಣಿದಾರರಿಗೆ ಹೇಗೆ ಪರಿಹಾರ ಕೊಡಿಸುತ್ತೀರಿ.? ಇದುವರೆಗೆ ಕೇವಲ DICGC ವಿಮೆ ಹಣ ಅಂದರೆ ಸಾರ್ವಜನಿಕರ ವಿಮೆ ಹಣವನ್ನು ಹಂಚಿದ್ದು ಬಿಟ್ಟರೆ ಬೇರೇನೂ ಕೆಲಸವಾಗಿಲ್ಲ. 12ಸಾವಿರ ಠೇವಣಿದಾರರ ಸುಮಾರು ಸಾವಿರ ಕೋಟಿ ರೂಪಾಯಿಗಳನ್ನು ಹೇಗೆ ವಾಪಸ್‌ ಕೊಡಿಸುತ್ತೀರಿ.? 120 ಸೊಸೈಟಿಗಳ ಠೇವಣಿದಾರರಿಗೆ ಯಾವ ರೀತಿ ಪರಿಹಾರ ಕೊಡಿಸುತ್ತೀರಿ.? ಏಕೆ ಈ ಸೊಸೈಟಿಗಳ ಹೆಸರುಗಳನ್ನು ಬಹಿರಂಗವಾಗಿ ಘೋಷಣೆ ಮಾಡಿಲ್ಲ.? ಗ್ರಾಹಕರಿಗೆ ಏಕೆ ಸ್ಪಷ್ಟ ಮಾಹಿತಿಯನ್ನು ಕೊಡುತ್ತಿಲ್ಲ.? DICGC ವಿಮೆ ಕೇವಲ ವೈಯುಕ್ತಿಕ ಠೇವಣಿದಾರರಿಗೆ ಮಾತ್ರ ಸಿಗುತ್ತದೆ, ಸೊಸೈಟಿಗಳಲ್ಲಿ ಠೇವಣಿ ಇಟ್ಟವರಿಗೆ ಸಿಗುವುದಿಲ್ಲ ಎಂಬ ಸತ್ಯವನ್ನು ಏಕೆ ಮುಚ್ಚಿಟ್ಟಿದ್ದೀರಿ.? ಇವೆಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿ, ಠೇವಣಿದಾರರ ಕಟ್ಟಕಡೆಯ ರೂಪಾಯಿಯೂ ಅವರಿಗೆ ವಾಪಸ್‌ ಸಿಗುವಂತೆ ಮಾಡಿ, ವಂಚಕರಿಗೆ ಶಿಕ್ಷೆಯಾಗುವಂತೆ ಮಾಡಿ ಆ ನಂತರ ನೀವು ಸನ್ಮಾನ ಮಾಡಿಸಿಕೊಂಡರೆ ಅದಕ್ಕೆ ಯಾರದ್ದೇ ತಕರಾರಿಲ್ಲ. ಆದರೆ ಅದ್ಯಾವುದನ್ನೂ ಮಾಡದೆ ಕೇವಲ ತಮಗೆ ಬೇಕಾದವರಿಂದ ಸನ್ಮಾನ ಸಮಾರಂಭಗಳನ್ನು ಏರ್ಪಡಿಸಿಕೊಂಡು ಸನ್ಮಾನ ಮಾಡಿಸಿಕೊಳ್ಳುವುದು ಒಪ್ಪತಕ್ಕುದ್ದಲ್ಲ ಎಂದು ಆಕ್ರೋಶ ಹೊರಹಾಕಿದರು.

Shree Guru Raghavendra Credit Co-operative Bank  saaksha tv

ಇನ್ನು ಜನವರಿ 10ರಂದು ಠೇವಣಿದಾರರಿಂದ ನೆಟ್ಟಕಲ್ಲಪ್ಪ ಸರ್ಕಲ್‌ನಲ್ಲಿರುವ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನಿರಾಕರಿಸಲಾಗಿದೆ. ಆದರೆ ಅದೇ ಮೈದಾನದಲ್ಲಿ ಶಾಸಕರು, ಸಂಸದರಿಗೆ ಬೇಕಾದ ಸಂಘಟನೆಗಳ ಕಾರ್ಯಕ್ರಮಗಳು ಮಾತ್ರ ನಿರಂತರವಾಗಿ ನಡೆಯುತ್ತಲೇ ಇವೆ. ಯಾರು ಏನೇ ಮಾಡಿದರೂ ಹೋರಾಟ ಮಾತ್ರ ನಿಲ್ಲುವುದಿಲ್ಲ. ಜನವರಿ 7ರಂದು ಶಾಸಕರು, ಸಂಸದರ ಸನ್ಮಾನ ಸಮಾರಂಭಕ್ಕೆ ಮಾನ್ಯ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಆಗಮಿಸುತ್ತಿದ್ದು ಅಂದು ಠೇವಣಿದಾರರೆಲ್ಲಾ ಸೇರಿ ಸಚಿವರು, ಶಾಸಕರು, ಸಂಸದರಿಗೆ ಮುಖಾಮುಖಿ ಪ್ರಶ್ನೆ ಕೇಳಲಿದ್ದಾರೆ.

ಇನ್ನು ಜನವರಿ 10ರಂದು ಗುರು ರಾಘವೇಂದ್ರ ಕ್ರೆಡಿಟ್‌ ಕೋ-ಆಪರೇಟಿವ್‌ ಬ್ಯಾಂಕ್‌ನ ಮುಂದೆ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಡಾ. ಶಂಕರ್‌ ಗುಹಾ ತಿಳಿಸಿದ್ದಾರೆ.

ಇದೇ ವೇಳೆ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಠೇವಣಿದಾರರು ಪತ್ರ ಬರೆಯುವ ಮೂಲಕ ಪತ್ರ ಚಳುವಳಿ ಆರಂಭಿಸಲಿದ್ದಾರೆ. ಇದುವರೆಗೆ ಬ್ಯಾಂಕ್‌ ಠೇವಣಿದಾರರು ಅನುಭವಿಸಿರುವ ಸಂಕಷ್ಟವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಗಮನಕ್ಕೆ ತರುವಲ್ಲಿ ಸ್ಥಳೀಯ ಶಾಸಕರು ಮತ್ತು ಸಂಸದರು ವಿಫಲರಾಗಿರುವುದರಿಂದ ಇದೀಗ ಠೇವಣಿದಾರರೇ ನೇರವಾಗಿ ಪ್ರಧಾನಿ ಪತ್ರ ಬರೆದು ತಮ್ಮ ಪರಿಸ್ಥಿತಿಯನ್ನು ವಿವರಿಸಲಿದ್ದಾರೆ ಎಂದು ಗುಹಾ ಅವರು ತಿಳಿಸಿದರು.

Tags: #Saaksha TVbangaloreCredit Co-operative BankDr. Shankar Guha Dwarkanath Bellu Shree Guru Raghavendra
ShareTweetSendShare
Join us on:

Related Posts

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 25, 2026
0

ದಿನ ಭವಿಷ್ಯ : 25-06-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನ. ನಿಮ್ಮ ರಾಶ್ಯಾಧಿಪತಿ ಕುಜನ ಪ್ರಭಾವದಿಂದಾಗಿ ನೀವು ಯಾವುದೇ ಕೆಲಸವನ್ನು ಕೈಗೆತ್ತಿಕೊಂಡರೂ ಅದನ್ನು...

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

by admin
June 24, 2026
0

  ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

by Shwetha
June 24, 2026
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

by Shwetha
June 24, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿದ್ದು, ಈ ಕುರಿತು ಮಹಾಲೇಖಪಾಲರ ಕಚೇರಿ (CAG) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಲಿಖಿತ ಸ್ಪಷ್ಟನೆ...

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

by Shwetha
June 24, 2026
0

ಶಿರಸಿ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣವಾಗಿ ರಾಜಕೀಯ ದಿವಾಳಿತನಕ್ಕೆ ತಲುಪಿದ್ದಾರೆ ಎಂದು ಶಾಸಕ ಶಿವರಾಮ್ ಹೆಬ್ಬಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram